Wed,Feb25,2026
ಕನ್ನಡ / English

ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..?? : ದಾಖಲೆ ಸಮೇತ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಮಂತ್ರಿ ಕುಮಾರಸ್ವಾಮಿ ವಾಗ್ದಾಳಿ | JANATA NEWS

23 Aug 2024

ನವದೆಹಲಿ : ಮೂಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ದಿನದಿಂದಕ್ಕೆ ಹೆಚ್ಚು ಸಂಕಷ್ಟಕ್ಕೆ ಸೀಲುಕುವಂತೆ ಭಾಸವಾಗುತ್ತಿದ್ದು, ಹಗರಣಕ್ಕೆ ಪುಷ್ಟಿ ನೀಡುವ ಹೊಸ ದಾಖಲೆಗಳು ದಿನಕ್ಕೊಂದು ಹೊರಗೆ ಬರಲಾರಂಬಿಸಿದೆ.

ಇನ್ನೂ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಎಂದಿನ ಶೈಲಿಯಲ್ಲಿ ದಾಖಲೆ ಸಮೇತ ಸಿದ್ದರಾಮಯ್ಯ ಅವರನ್ನು ತರಾಟೆ ತೆಗೆದುಕೊಂಡಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರ ಉಂಟುಮಾಡಿದ್ದಾರೆ.

"ಸನ್ಮಾನ್ಯ ಸಿಎಂ ಸಿದ್ದರಾಮಯ್ಯ ನವರೇ.. ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ. "50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ 'ಒತ್ತಾಯ' ಮಾಡಿದ್ದಾರೆ!!" ಎಂದು ಎಚ್.ಡಿ.ಕೆ ದಾಖಲೆ ಸಮೇತ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

"ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ."

"ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಸೂಪರ್ ಸಿಎಂ ಅವರೇ 'ಒತ್ತಾಯಿಸಿರುತ್ತಾರೆ!!!' ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ. ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..?? ", ಎಂದು ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಎಕ್ಸ್ ನಲ್ಲಿ ಸಾಲು ಸಾಲು ಸವಾಲುಗಳೊಂದಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

English summary :Whitener swallowed the black spot..?? : Union Minister Kumaraswamy lashed out against CM Siddaramaiah with record

ಶಿವಮೊಗ್ಗದಲ್ಲಿ 15 ವರ್ಷದ ಬಾಲಕನ ಹತ್ಯೆ; ನಗರದ ಕೆಲವು ಭಾಗಗಳಲ್ಲಿ ಉದ್ವಿಗ್ನತೆ
ಶಿವಮೊಗ್ಗದಲ್ಲಿ 15 ವರ್ಷದ ಬಾಲಕನ ಹತ್ಯೆ; ನಗರದ ಕೆಲವು ಭಾಗಗಳಲ್ಲಿ ಉದ್ವಿಗ್ನತೆ
ಬಿಎಸ್ಎಫ್ ಕಮಾಂಡೆಂಟ್ ಜಿಬು ಮ್ಯಾಥ್ಯೂ ಸಿಬಿಐನಿಂದ ಬಂಧನ: 96 ಕೋಟಿ ವಶ?
ಬಿಎಸ್ಎಫ್ ಕಮಾಂಡೆಂಟ್ ಜಿಬು ಮ್ಯಾಥ್ಯೂ ಸಿಬಿಐನಿಂದ ಬಂಧನ: 96 ಕೋಟಿ ವಶ?
ಅಂಗನವಾಡಿ ಶಿಕ್ಷಕರ ನೇಮಕಾತಿಗೆ ಉರ್ದು ಪ್ರಾವೀಣ್ಯತೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ಅಂಗನವಾಡಿ ಶಿಕ್ಷಕರ ನೇಮಕಾತಿಗೆ ಉರ್ದು ಪ್ರಾವೀಣ್ಯತೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ಇರಾನ್‌ನಿಂದ ತಕ್ಷಣ ಹೊರಹೋಗುವಂತೆ ಭಾರತೀಯರಿಗೆ ಸಲಹೆ ನೀಡಿದ ಭಾರತ ಸರ್ಕಾರ
ಇರಾನ್‌ನಿಂದ ತಕ್ಷಣ ಹೊರಹೋಗುವಂತೆ ಭಾರತೀಯರಿಗೆ ಸಲಹೆ ನೀಡಿದ ಭಾರತ ಸರ್ಕಾರ
ಪ್ರಧಾನಿ ಮೋದಿ ಭಾರತವನ್ನು ಎಲೆಕ್ಟ್ರಾನಿಕ್ಸ್ ಶಕ್ತಿ ಕೇಂದ್ರವಾಗಿ ಸ್ಥಾಪಿಸಿದ್ದಾರೆ : ಅಶ್ವಿನಿ ವೈಷ್ಣವ್
ಪ್ರಧಾನಿ ಮೋದಿ ಭಾರತವನ್ನು ಎಲೆಕ್ಟ್ರಾನಿಕ್ಸ್ ಶಕ್ತಿ ಕೇಂದ್ರವಾಗಿ ಸ್ಥಾಪಿಸಿದ್ದಾರೆ : ಅಶ್ವಿನಿ ವೈಷ್ಣವ್
ಭಾರತದ ಮೇಲಿನ ಅಮೆರಿಕದ ಸುಂಕವನ್ನು ಶೇ.10ಕ್ಕೆ ಇಳಿಸುವುದಾಗಿ ಸ್ಪಷ್ಟಪಡಿಸಿದ ಶ್ವೇತಭವನ
ಭಾರತದ ಮೇಲಿನ ಅಮೆರಿಕದ ಸುಂಕವನ್ನು ಶೇ.10ಕ್ಕೆ ಇಳಿಸುವುದಾಗಿ ಸ್ಪಷ್ಟಪಡಿಸಿದ ಶ್ವೇತಭವನ
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಟ್ರಂಪ್ ಅವರು ಸುಂಕಕ್ಕಾಗಿ ತುರ್ತು ಅಧಿಕಾರ ಬಳಸುವುದರ ವಿರುದ್ಧ ಯುಎಸ್ ಸುಪ್ರೀಂ ಕೋರ್ಟ್ ತೀರ್ಪು
ಜಾಗತಿಕ ಎಐ ಅಭಿವೃದ್ಧಿಯನ್ನು ರೂಪಿಸಲು ದೆಹಲಿ ಘೋಷಣೆಯನ್ನು ಅಳವಡಿಸಿಕೊಂಡ 75 ರಾಷ್ಟ್ರಗಳು
ಜಾಗತಿಕ ಎಐ ಅಭಿವೃದ್ಧಿಯನ್ನು ರೂಪಿಸಲು ದೆಹಲಿ ಘೋಷಣೆಯನ್ನು ಅಳವಡಿಸಿಕೊಂಡ 75 ರಾಷ್ಟ್ರಗಳು
ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಯಲ್ಲಿ ಭಾರತದ ಡಿಜಿಟಲ್ ವೃದ್ಧಿಯನ್ನು ಶ್ಲಾಘಿಸಿದ ಮ್ಯಾಕ್ರನ್
ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಯಲ್ಲಿ ಭಾರತದ ಡಿಜಿಟಲ್ ವೃದ್ಧಿಯನ್ನು ಶ್ಲಾಘಿಸಿದ ಮ್ಯಾಕ್ರನ್
ನಿಯೋಗ ಮಟ್ಟದ ಮಾತುಕತೆ ನಡೆಸಿದ ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್
ನಿಯೋಗ ಮಟ್ಟದ ಮಾತುಕತೆ ನಡೆಸಿದ ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್
ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿವೈಡರ್ ಹಾರಿ ಐವರು ಸಾವು
ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿವೈಡರ್ ಹಾರಿ ಐವರು ಸಾವು

ನ್ಯೂಸ್ MORE NEWS...