Tue,May26,2026
ಕನ್ನಡ / English

ಮುಸ್ಲಿಮರ ಜಾತಿ ಬಗ್ಗೆ ಮಾತು ಬರುತ್ತಿದ್ದಂತೆ ಕಾಂಗ್ರೆಸ್ ಮುಖಂಡರ ಬಾಯಿಗೆ ಬೀಗ ಹಾಕಿಬಿಡುತ್ತದೆ - ಪ್ರಧಾನಿ ಮೋದಿ | JANATA NEWS

09 Oct 2024

ನವದೆಹಲಿ : ಮುಸ್ಲಿಮರ ಜಾತಿ ಬಗ್ಗೆ ಮಾತು ಬರುತ್ತಿದ್ದಂತೆ ಕಾಂಗ್ರೆಸ್ ಮುಖಂಡರ ಬಾಯಿಗೆ ಬೀಗ ಹಾಕಿಬಿಡುತ್ತದೆ. ಆದರೆ ಯಾವಾಗಲಾದರೂ ಹಿಂದು ಸಮಾಜದ ವಿಷಯ ಬಂದರೆ, ಕಾಂಗ್ರೆಸ್ ಅದರ ಚರ್ಚೆಯನ್ನು ಜಾತಿಯಿಂದಲೇ ಶುರು ಮಾಡುತ್ತದೆ. - ಎಂದು ಮುಸ್ಲಿಂ ಸಮುದಾಯದಲ್ಲಿರುವ ಜಾತಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಹಿರಂಗವಾಗಿ ಮಾತನಾಡಿದ್ದಾರೆ. ಅವರು ಇಂದು ಮಹಾರಾಷ್ಟ್ರದಲ್ಲಿ ಯೋಜನೆಗಳಿಗೆ ವರ್ಚುಯಲ್ ಮೀಟಿಂಗ್ ಮೂಲಕ ಚಾಲನೆ ನೀಡಿ ಮಾತನಾಡಿದರು.

"ಕಾಂಗ್ರೆಸ್ ನ ಫಾರ್ಮುಲಾ ಸ್ಪಷ್ಟವಾಗಿದೆ, ಮುಸಲ್ಮಾನರಿಗೆ ಹೆದರಿಸುತ್ತಿರುವ, ಅವರನ್ನು ವೋಟ್ ಬ್ಯಾಂಕ್ ಆಗಿ ಪರಿವರ್ತಿಸುವುದು. ಕಾಂಗ್ರೆಸ್ ನ ಮುಖಂಡರು ಇಲ್ಲಿವರೆಗೂ ಎಂದಿಗೂ ಹೇಳಲಿಲ್ಲ ಮುಸ್ಲಿಮರಲ್ಲಿ ಎಷ್ಟು ಜಾತಿ ಇರುತ್ತದೆ ಎಂದು. ಮುಸ್ಲಿಮರ ಜಾತಿ ಬಗ್ಗೆ ಮಾತು ಬರುತ್ತಿದ್ದಂತೆ ಕಾಂಗ್ರೆಸ್ ಮುಖಂಡರ ಬಾಯಿಗೆ ಬೀಗ ಹಾಕಿಬಿಡುತ್ತದೆ. ಆದರೆ ಯಾವಾಗಲಾದರೂ ಹಿಂದು ಸಮಾಜದ ವಿಷಯ ಬಂದರೆ, ಕಾಂಗ್ರೆಸ್ ಅದರ ಚರ್ಚೆಯನ್ನು ಜಾತಿಯಿಂದಲೇ ಶುರು ಮಾಡುತ್ತದೆ." ಎಂದು ಪ್ರಧಾನಿ ಹೇಳಿದ್ದಾರೆ.

"ಕಾಂಗ್ರೆಸ್ ನ ನೀತಿ ಎಂದರೆ, ಹಿಂದುಗಳ ಒಂದು ಜಾತಿಯನ್ನು ಇನ್ನೊಂದು ಜಾತಿಯೊಂದಿಗೆ ಜಗಳ ಹಚ್ಚುವುದು. ಕಾಂಗ್ರೆಸ್ಸಿಗೆ ಗೊತ್ತು, ಎಷ್ಟು ಹಿಂದುಗಳು ಪಾಲಾಗುತ್ತಾರೋ ಅಷ್ಟು ಅದಕ್ಕೆ ಲಾಭವಾಗುತ್ತದೆ. ಕಾಂಗ್ರೆಸ್ ಹೇಗಾದರೂ ಮಾಡಿ ಹಿಂದೂ ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಲು ಬಯಸುತ್ತದೆ. ಏಕೆಂದರೆ, ಅದು ಆ ಬೆಂಕಿ ಮೇಲೆ ತಮ್ಮ ರಾಜಕೀಯ ರೊಟ್ಟಿ ಬೇಸಿಕೊಳ್ಳುವ ಯೋಜನೆ ಹೊಂದಿದೆ. ಇಂದು ಸಮಾಜವನ್ನು ಒಡೆದು ಅದನ್ನು ತಮ್ಮ ರಾಜಕೀಯ ಗೆಲುವಿನ ಫಾರ್ಮುಲಾ ಮಾಡಿಕೊಳ್ಳುವುದೇ ಕಾಂಗ್ರೆಸ್ ನ ರಾಜನೀತಿಯ ಆಧಾರವಾಗಿದೆ." ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ನೀತಿಯ ಬಗ್ಗೆ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ಹರಿಯಾಣದಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ ಅವರು, "ದೇಶದ ಹುಮ್ಮಸ್ಸು ಏನಿದೆ ಎಂದು ಹರಿಯಾಣ ತಿಳಿಸಿದೆ. ಸತತ ಮೂರನೇ ಬಾರಿ ಆರಿಸಿ ಬರುವುದು ಐತಿಹಾಸಿಕವಾಗಿದೆ", ಎಂದಿದ್ದಾರೆ.

"ಕಾಂಗ್ರೆಸ್ ನ ಪೂರ್ತಿ ಇಕೋ ಸಿಸ್ಟಮ್ ಹಾಗೂ ಅರ್ಬನ್ ನಕ್ಸಲ್ ಪೂರ್ತಿ ತಂಡ ಜನರನ್ನು ಹಾದಿ ತಪ್ಪಿಸಲು ತೊಡಗಿತ್ತು, ಆದರೆ ಕಾಂಗ್ರೆಸ್ ನ ಎಲ್ಲಾ ಷಡ್ಯಂತ್ರಗಳು ಧ್ವಂಸಗೊಂಡಿವೆ."

"ಇವರು ದಲಿತ ಸಮಾಜದಲ್ಲಿ ಸುಳ್ಳು ಹಬ್ಬಿಸಲು ಪ್ರಯತ್ನಿಸಿದರು, ಆದರೆ ದಲಿತ ಸಮಾಜದವರು ಇವರ ದುರುದ್ದೇಶವನ್ನು ಅಳತೆ ಮಾಡಿ ಬಿಟ್ಟರು ತಮ್ಮ ಮೀಸಲಾತಿಯನ್ನು ಕಸಿದುಕೊಂಡು ಕಾಂಗ್ರೆಸ್ ತಮ್ಮ ವೋಟ್ ಬ್ಯಾಂಕ್ ಗೆ ಹಂಚು ತ್ತಾರೆ ಎಂದು ದಲಿತ ಸಮಾಜದವರಿಗೆ ಮನವರಿಕೆಯಾಯಿತು."

"ಇಂದು ಹರಿಯಾಣದ ದಲಿತ ಸಮಾಜ ಬಿಜೆಪಿಗೆ ಅಭೂತಪೂರ್ವ ಬೆಂಬಲ ನೀಡಿದೆ. ಹರಿಯಾಣದ ಓಬಿಸಿ ಬಿಜೆಪಿಯ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಅದರೊಂದಿಗೆ ಇದೆ. ಕಾಂಗ್ರೆಸ್ ರೈತರನ್ನು ಪ್ರಚೋದಿಸಿತು, ಆದರೆ ರೈತರಿಗೆ ಗೊತ್ತು ಅವರಿಗೆ ಎಂ.ಎಸ್.ಪಿ ಕೊಟ್ಟವರು ಯಾರು ಎಂದು.
ಹರಿಯಾಣದ ಜನ ತೋರಿಸಿದ್ದಾರೆ, ಈಗ ಅವರು ಕಾಂಗ್ರೆಸ್ ನ ಹಾಗೂ ಅರ್ಬನ್ ನಕ್ಸಲರ ದ್ವೇಷದ ಷಡ್ಯಂತರಕ್ಕೆ ಬಲಿಯಾಗುವುದಿಲ್ಲ ಎಂದು."

"ಕಾಂಗ್ರೆಸ್ ಯಾವಾಗಲೂ ಒಡೆದು ಅಧಿಕಾರ ಪಡೆಯುವ ಫಾರ್ಮುಲಾದ ಮೇಲೆ ನಡೆದಿದೆ. ಕಾಂಗ್ರೆಸ್ ಪದೇಪದೇ ತಾನೊಂದು ಬೇಜವಾಬ್ದಾರಿ ಯುತ ದಳ ಎಂದು ಸಾಬೀತುಪಡಿಸಿದೆ. ಅದು ಈಗಲೂ ದೇಶವನ್ನು ಒಡೆಯಲು ಹೊಸ ಹೊಸ ನಿರೂಪಣೆಯನ್ನು ಸಿದ್ಧಪಡಿಸುತ್ತಿದೆ. ಕಾಂಗ್ರೆಸ್ ಜನರನ್ನು ದಿಕ್ಕು ತಪ್ಪಿಸಲು ಹೊಸ ಹೊಸ ಫಾರ್ಮುಲಾ ವನ್ನು ತರುತ್ತಿರುತ್ತದೆ." ಎಂದು ಪ್ರಧಾನಿ ಮೋದಿ ಎಚ್ಚರಿಸಿದ್ದಾರೆ.

English summary :When talking about caste of Muslims, Congress leaders shut their mouths - PM Modi

ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ಕೋಮುಗಲಭೆ ಪ್ರಕರಣ ಸೇರಿ ಒಟ್ಟು 52 ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ : ಬಿಜೆಪಿ ಆಕ್ರೋಶ
ಕೋಮುಗಲಭೆ ಪ್ರಕರಣ ಸೇರಿ ಒಟ್ಟು 52 ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ : ಬಿಜೆಪಿ ಆಕ್ರೋಶ
ಮದರಸಾಗಳಲ್ಲಿಯೂ ವಂದೇ ಮಾತರಂ ಕಡ್ಡಾಯಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರ
ಮದರಸಾಗಳಲ್ಲಿಯೂ ವಂದೇ ಮಾತರಂ ಕಡ್ಡಾಯಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರ
ಪ್ರಧಾನಿ ವಿದೇಶ ಪ್ರವಾಸದ ಉದ್ದೇಶ ಅರ್ಥಮಾಡಿಕೊಳ್ಳುವ ಬೌದ್ಧಿಕ ಸಾಮರ್ಥ್ಯ ರಾಹುಲ್ ಗಾಂಧಿಗೆ ಇಲ್ಲ - ವಿದೇಶಾಂಗ ಸಚಿವ ಎಸ್. ಜೈಶಂಕರ್
ಪ್ರಧಾನಿ ವಿದೇಶ ಪ್ರವಾಸದ ಉದ್ದೇಶ ಅರ್ಥಮಾಡಿಕೊಳ್ಳುವ ಬೌದ್ಧಿಕ ಸಾಮರ್ಥ್ಯ ರಾಹುಲ್ ಗಾಂಧಿಗೆ ಇಲ್ಲ - ವಿದೇಶಾಂಗ ಸಚಿವ ಎಸ್. ಜೈಶಂಕರ್
ಪಾಕಿಸ್ತಾನ ವಾಯುಪಡೆಯ ಜೆಎಫ್ -17 ಫೈಟರ್ ಜೆಟ್ ಮತ್ತೆ ಕ್ರ್ಯಾಷ್ ಆಗಿದೆ : ಈಗ ಪಂಜಾಬ್ ಪ್ರಾಂತ್ಯದಲ್ಲಿ
ಪಾಕಿಸ್ತಾನ ವಾಯುಪಡೆಯ ಜೆಎಫ್ -17 ಫೈಟರ್ ಜೆಟ್ ಮತ್ತೆ ಕ್ರ್ಯಾಷ್ ಆಗಿದೆ : ಈಗ ಪಂಜಾಬ್ ಪ್ರಾಂತ್ಯದಲ್ಲಿ
ದ್ವಿಪಕ್ಷೀಯ ಮಾತುಕತೆಗೂ ಮುನ್ನ ಇಟಲಿ ಪ್ರಧಾನಿ ಮೆಲೋನಿ ರನ್ನು ರೋಮ್‌ನಲ್ಲಿ ಭೇಟಿಯಾದ ಪ್ರಧಾನಿ ಮೋದಿ
ದ್ವಿಪಕ್ಷೀಯ ಮಾತುಕತೆಗೂ ಮುನ್ನ ಇಟಲಿ ಪ್ರಧಾನಿ ಮೆಲೋನಿ ರನ್ನು ರೋಮ್‌ನಲ್ಲಿ ಭೇಟಿಯಾದ ಪ್ರಧಾನಿ ಮೋದಿ
ಕೊಡಗಿನ ದುಬಾರೆ ಶಿಬಿರದಲ್ಲಿ ಆನೆ ದಾಳಿಗೆ ಚೆನ್ನೈನ ಪ್ರವಾಸಿಗರೊಬ್ಬರು ಬಲಿ
ಕೊಡಗಿನ ದುಬಾರೆ ಶಿಬಿರದಲ್ಲಿ ಆನೆ ದಾಳಿಗೆ ಚೆನ್ನೈನ ಪ್ರವಾಸಿಗರೊಬ್ಬರು ಬಲಿ
ಪ್ರಧಾನಿ ಮೋದಿಗೆ ಸ್ವೀಡನ್ ನಿಂದ ಪ್ರತಿಷ್ಠಿತ ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್ ಪ್ರಶಸ್ತಿ ಪ್ರದಾನ
ಪ್ರಧಾನಿ ಮೋದಿಗೆ ಸ್ವೀಡನ್ ನಿಂದ ಪ್ರತಿಷ್ಠಿತ ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್ ಪ್ರಶಸ್ತಿ ಪ್ರದಾನ
ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ
ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಮತ್ತೊಬ್ಬ ಮಾಸ್ಟರ್‌ಮೈಂಡ್‌ನ ಗುರುತಿಸಿದ ಸಿಬಿಐ
ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಹಾರ್ಮುಜ್ ಮೂಲಕ ಎಲ್‌ಪಿಜಿ ವಾಹಕಗಳ ಸುರಕ್ಷಿತ ಸಾಗಣೆಯನ್ನು ಭಾರತ ದೃಢಪಡಿಸಿದೆ; ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಬ್ಬಂದಿಯನ್ನು ರಕ್ಷಿಸಲಾಗಿದೆ.
ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ
ಐಯುಎಂಎಲ್ ಬೆಂಬಲ : ಕೆ.ಸಿ. ವೇಣುಗೋಪಾಲ್ ಬದಲು ವಿ.ಡಿ. ಸತೀಶನ್ ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆ
 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ
16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ(ಎಸ್.ಐ.ಆರ್) ಚುನಾವಣಾ ಆಯೋಗ ಆದೇಶ

ನ್ಯೂಸ್ MORE NEWS...