Wed,Apr23,2025
ಕನ್ನಡ / English

ವಿದ್ಯಾ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ವಿರುದ್ಧ ಕ್ರಮಕ್ಕೆ ಆದೇಶಿಸಿದ ಸಚಿವ ಮಧು ಬಂಗಾರಪ್ಪ | JANATA NEWS

20 Nov 2024
1414

ಬೆಂಗಳೂರು : ವಿದ್ಯಾ ಮಂತ್ರಿಗೆ ಕನ್ನಡ ಬರಲ್ಲ ಎಂದ ಶಾಲಾ ವಿದ್ಯಾರ್ಥಿಯ ಮೇಲೆ ಗಂಭೀರ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆದೇಶಿಸಿದ್ದಾರೆ. ಶಿಕ್ಷಣ ಇಲಾಖೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಭಾಗವಹಿಸಿದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ, ಎನ್ನಲಾಗಿದೆ.

ಸಭೆಯ ಸಂದರ್ಭದಲ್ಲಿ ವಿದ್ಯಾರ್ಥಿ ಓರ್ವ ಮಾತನಾಡಿ, "ವಿದ್ಯಾ ಮಂತ್ರಿಗೆ ಕನ್ನಡ ಬರಲ್ಲ", ಎಂದಿರುವುದನ್ನು ಕೇಳಿಸಿಕೊಂಡ ಸಚಿವರು ಅಧಿಕಾರಿಗಳಿಗೆ ಇದನ್ನು ತುಂಬಾ ಗಂಭೀರವಾಗಿ ಪರಿಗಣಿಸಿ, ಆ ವಿದ್ಯಾರ್ಥಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದು, ಈ ವಿಡಿಯೋ ವೈರಲ್ ಆಗುತ್ತಿದೆ.

ಈ ವಿಡಿಯೋವನ್ನು ಎಕ್ಸ್ ನಲ್ಲಿ ಹಂಚಿಕೊಂಡಿರುವ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು, "ಗುಬ್ಬಿ ಮೇಲೆ ಬ್ರಹ್ಮಾಸ್ತ್ರ! ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ ಎಂಬುದು ರಾಜ್ಯಕ್ಕೆ ತಿಳಿದಂತ ವಿಚಾರ. ವಿದ್ಯಾರ್ಥಿ ಒಬ್ಬ ಸಚಿವರಿಗೆ ಕನ್ನಡ ಬರೋದಿಲ್ಲ ಅಂತ ಹೇಳಿದ್ದಕ್ಕೆ ಅವನ ಮೇಲೆ ಕ್ರಮ ಕೈಗೊಳ್ಳುವಂತೆ ಮಾಧ್ಯಮಗಳ ಎದುರೇ ಸಚಿವರು ಹೇಳಿದ್ದು ಇವರು ಎಷ್ಟು ಅಪ್ರಾಮಾಣಿಕರು ಎಂಬುದು ತೋರಿಸುತ್ತದೆ. ", ಎಂದು ತರಾಟೆ ತೆಗೆದುಕೊಂಡಿದ್ದಾರೆ.

ಈ ಪೋಸ್ಟ್ ನಲ್ಲಿ, "ರಾಜ್ಯದ ಶಿಕ್ಷಣ ಸಚಿವರು ಕನ್ನಡವನ್ನು ಸ್ಫುಟವಾಗಿ ಮಾತನಾಡಲು, ಬರೆಯಲು, ಓದಲು, ಸಂವಹನ ಮಾಡಲು ಕಲಿಯಬೇಕು. ವಿದ್ಯಾರ್ಥಿಗಳಾಗಲಿ, ಪತ್ರಕರ್ತರಿಂದಾಗಲಿ ರಚನಾತ್ಮಕ ಟೀಕೆಗಳನ್ನು ಸ್ವೀಕರಿಸಬೇಕು. ಪ್ರಜಾಪ್ರಭುತ್ವ ದಲ್ಲಿ ವಿದ್ಯಾರ್ಥಿಗಳಿಗೂ ಸೇರಿದಂತೆ ಎಲ್ಲರಿಗೂ ವಾಕ್ ಸ್ವಾತಂತ್ರ್ಯವಿರುತ್ತದೆ., ಇದನ್ನು ದಮನಿಸುವುದು ಹೇಯ ಹಾಗೂ ಖಂಡನೀಯ. ಸಚಿವರ ಅಸಮರ್ಥತೆಯನ್ನು ಪ್ರಶ್ನಿಸಿದ ವಿದ್ಯಾರ್ಥಿಯ ಮೇಲೆ ಯಾವುದೇ ಕ್ರಮ ಕೈಗೊಳ್ಳಬಾರದು," ಎಂದು ಒತ್ತಾಯಿಸಿದ್ದಾರೆ.

English summary :Minister Madhu Bangarappa ordered action against the student saying that the education minister does not know Kannada

ಬಹಳ ಕುತೂಹಲ ಕೆರಳಿಸಿದ್ದ  ವಕ್ಫ್ (ತಿದ್ದುಪಡಿ) ಮಸೂದೆ, 2025 ಸಂಸತ್ತಿನಲ್ಲಿ ಅಂಗೀಕಾರ
ಬಹಳ ಕುತೂಹಲ ಕೆರಳಿಸಿದ್ದ ವಕ್ಫ್ (ತಿದ್ದುಪಡಿ) ಮಸೂದೆ, 2025 ಸಂಸತ್ತಿನಲ್ಲಿ ಅಂಗೀಕಾರ
ಮುಸಲ್ಮಾನರ ಏಳಿಗೆಗಾಗಿ ಸಂವಿಧಾನ ಬದಲಾವಣೆ - ಡಿಸಿಎಂ ಡಿಕೆಎಸ್ ಹೇಳಿಕೆಯನ್ನು ಖಂಡಿಸಿದ ಬಿಜೆಪಿ
ಮುಸಲ್ಮಾನರ ಏಳಿಗೆಗಾಗಿ ಸಂವಿಧಾನ ಬದಲಾವಣೆ - ಡಿಸಿಎಂ ಡಿಕೆಎಸ್ ಹೇಳಿಕೆಯನ್ನು ಖಂಡಿಸಿದ ಬಿಜೆಪಿ
ಪೊಲೀಸ ಉನ್ನತ ಅಧಿಕಾರಿಗಳ ನಡವಳಿಕೆಯು ನಾಚಿಕೆಗೇಡಿನ ಸಂಗತಿ... ಡಿಎಂಕೆಯ ಕೈಗೊಂಬೆಗಳಾಗಿದ್ದಾರೆ - ಅಣ್ಣಾಮಲೈ
ಪೊಲೀಸ ಉನ್ನತ ಅಧಿಕಾರಿಗಳ ನಡವಳಿಕೆಯು ನಾಚಿಕೆಗೇಡಿನ ಸಂಗತಿ... ಡಿಎಂಕೆಯ ಕೈಗೊಂಬೆಗಳಾಗಿದ್ದಾರೆ - ಅಣ್ಣಾಮಲೈ
ಜಗತ್ತಿನ ಯಾವುದೇ ಭಯೋತ್ಪಾದಕ ದಾಳಿಯ ಬೇರು ಪಾಕಿಸ್ತಾನದಲ್ಲಿ - ಪ್ರಧಾನಿ ಮೋದಿ
ಜಗತ್ತಿನ ಯಾವುದೇ ಭಯೋತ್ಪಾದಕ ದಾಳಿಯ ಬೇರು ಪಾಕಿಸ್ತಾನದಲ್ಲಿ - ಪ್ರಧಾನಿ ಮೋದಿ
ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ

ನ್ಯೂಸ್ MORE NEWS...