Wed,Jun18,2025
ಕನ್ನಡ / English

ಸಂಭಾಲ್‌ ಕಲ್ಲುತೂರಾಟದಲ್ಲಿ 4 ಸಾವು, 20ಕ್ಕೂ ಅಧಿಕ ಭದ್ರತಾ ಸಿಬ್ಬಂದಿ ಗಾಯ :ಶಾಹಿ ಜಾಮಾ ಮಸೀದಿಯಲ್ಲಿ ಹೆಚ್ಚಿನ ಭದ್ರತೆ, ಶಾಲೆ, ಇಂಟರ್ನೆಟ್ ಬಂದ್ | JANATA NEWS

25 Nov 2024

ಸಂಭಾಲ್ : ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಜಾಮಾ ಮಸೀದಿಯ ಭಾನುವಾರ ಸಮೀಕ್ಷೆಯ ಸಂದರ್ಭದಲ್ಲಿ, ಸಮೀಕ್ಷೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ತೀವ್ರಗಾಮಿ ಪ್ರತಿಭಟನಾಕಾರರು ಪೊಲೀಸರೊಂದಿಗೆ ಹಿಂಸಾತ್ಮಕವಾಗಿ ಘರ್ಷಣೆ ನಡೆಸಿ ಕಲ್ಲುತೂರಾಟ ನಡೆಸಿದರು.

ನಿನ್ನೆ ಮಸೀದಿಯ ಸಮೀಕ್ಷೆ ನಡೆಸಲು ಸಮೀಕ್ಷಾ ತಂಡ ಆಗಮಿಸಿದಾಗ ಕಲ್ಲು ತೂರಾಟ ನಡೆದ ಘಟನೆ ನಡೆದ ಬೆನ್ನಲ್ಲೇ ಸಂಭಾಲ್‌ನ ಶಾಹಿ ಜಾಮಾ ಮಸೀದಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಈ ಜಾಗದಲ್ಲಿ ಹರಿಹರ ದೇವಸ್ಥಾನವಿದೆ ಎಂದು ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ ಸರ್ವೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ. ಉತ್ತರ ಪ್ರದೇಶದ ಶಾಹಿ ಜಾಮಾ ಮಸೀದಿಯನ್ನು ತಲುಪಿದ ಸಮೀಕ್ಷಾ ತಂಡದ ಮೇಲೆ ತೀವ್ರಗಾಮಿ ಗುಂಪುಗಳಿಂದ ಭಾರೀ ಕಲ್ಲು ತೂರಾಟ ನಡೆಸಿದ್ದರು.

ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಸುಮಾರು 20 ಭದ್ರತಾ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ, ಎನ್ನಲಾಗಿದೆ.

ಈ ಹಿಂಸಾಚಾರದ ನಂತರ, ಆಡಳಿತವು 12 ನೇ ತರಗತಿಯವರೆಗಿನ ಶಾಲೆಗಳನ್ನು ಮುಚ್ಚಲು ಆದೇಶಿಸಿದೆ. ಇದರೊಂದಿಗೆ, ಇಂಟರ್ನೆಟ್ ಅನ್ನು ನಿಷೇಧಿಸಲಾಗಿದೆ. ದುಷ್ಕರ್ಮಿಗಳನ್ನು ಗುರುತಿಸಲಾಗುತ್ತಿದೆ.

ಸಂಭಾಲ್‌ನಲ್ಲಿ ನ್ಯಾಯಾಲಯ ನೇಮಿಸಿದ ಸರ್ವೇಕ್ಷಣಾ ತಂಡದ ಮೇಲೆ ದಾಳಿಯ ನಂತರ, ಸಾಕ್ಷ್ಯಾಧಾರಗಳ ನಾಶವನ್ನು ಶಂಕಿಸಲಾಗಿದೆ ಎಂದು, ಹಿರಿಯ ಹಿಂದೂ ಪರ ವಕೀಲ ವಿಷ್ಣು ಜೈನ್ ಭಾರತೀಯ ಪುರಾತತ್ವ ಸರ್ವೇಕ್ಷಣೆಯನ್ನು ತಕ್ಷಣವೇ ಸಂಭಾಲ್ ಶ್ರೀ ಹರಿ ಹರ್ ದೇವಸ್ಥಾನದ ನಿಯಂತ್ರಣಕ್ಕೆ ತೆಗೆದುಕೊಳ್ಳುವಂತೆ ವಿನಂತಿಸಿದರು.

ಭಾನುವಾರ ಬೆಳಿಗ್ಗೆ ಸಮೀಕ್ಷೆ ತಂಡವು ಕೆಲಸವನ್ನು ಪ್ರಾರಂಭಿಸಿದಾಗ ಹೆಚ್ಚಿನ ಸಂಖ್ಯೆಯ ಜನರು ಶಾಹಿ ಜಾಮಾ ಮಸೀದಿಯಲ್ಲಿ ಜಮಾಯಿಸಿ, ಅವರು ಅಲ್ಲಿ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಹಿಂಸಾಚಾರ ಪ್ರಾರಂಭವಾಯಿತು.

ಮಸೀದಿಯಲ್ಲಿ ಸಾಮಾನ್ಯವಾಗಿ ಮಧ್ಯಾಹ್ನ ನಡೆಯುವ ಪ್ರಾರ್ಥನೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಬೆಳಿಗ್ಗೆ ಸಮಯದಲ್ಲಿ ಸಮೀಕ್ಷೆ ನಡೆಸಲಾಗಿದೆ ಎಂದು ಜಿಲ್ಲಾ ಅಧಿಕಾರಿಗಳು ತಿಳಿಸಿದ್ದರು.

English summary :4 dead, more than 20 security staff injured in Sambhal stone pelting: High security at Shahi Jama Masjid, school, internet shutdown

ಭಾರತ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಎಂದಿಗೂ ಒಪ್ಪಿಕೊಂಡಿಲ್ಲ ಮತ್ತು ಎಂದಿಗೂ ಸ್ವೀಕರಿಸುವುದಿಲ್ಲ - ಅಧ್ಯಕ್ಷ ಟ್ರಂಪ್ ಗೆ ತಿಳಿಸಿ ಹೇಳಿದ ಪ್ರಧಾನಿ ಮೋದಿ
ಭಾರತ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಎಂದಿಗೂ ಒಪ್ಪಿಕೊಂಡಿಲ್ಲ ಮತ್ತು ಎಂದಿಗೂ ಸ್ವೀಕರಿಸುವುದಿಲ್ಲ - ಅಧ್ಯಕ್ಷ ಟ್ರಂಪ್ ಗೆ ತಿಳಿಸಿ ಹೇಳಿದ ಪ್ರಧಾನಿ ಮೋದಿ
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ : ಭಾರತೀಯ ವಿದ್ಯಾರ್ಥಿಗಳನ್ನು ಟೆಹ್ರಾನ್‌ನಿಂದ ಸ್ಥಳಾಂತರಿಸಿದ ಭಾರತ ಸರ್ಕಾರ
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ : ಭಾರತೀಯ ವಿದ್ಯಾರ್ಥಿಗಳನ್ನು ಟೆಹ್ರಾನ್‌ನಿಂದ ಸ್ಥಳಾಂತರಿಸಿದ ಭಾರತ ಸರ್ಕಾರ
G7 ಶೃಂಗಸಭೆಯಲ್ಲಿ ಭಾಗವಹಿಸಲು ದಶಕದ ನಂತರ ಕೆನಡಾಕ್ಕೆ ಆಗಮಿಸಿದ ಪ್ರಧಾನಿ ಮೋದಿ
G7 ಶೃಂಗಸಭೆಯಲ್ಲಿ ಭಾಗವಹಿಸಲು ದಶಕದ ನಂತರ ಕೆನಡಾಕ್ಕೆ ಆಗಮಿಸಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿಗೆ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಗೌರವ - ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಪ್ರಶಸ್ತಿ ಪ್ರದಾನ
ಪ್ರಧಾನಿ ಮೋದಿಗೆ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಗೌರವ - ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಪ್ರಶಸ್ತಿ ಪ್ರದಾನ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಆಸ್ಪತ್ರೆಗೆ ದಾಖಲು
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಆಸ್ಪತ್ರೆಗೆ ದಾಖಲು
ಮತ್ತೊಂದು ಬೋಯಿಂಗ್ 787 ತಾಂತ್ರಿಕ ಸಮಸ್ಯೆ : ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್ ವಿಮಾನ ಲಂಡನ್ ಗೆ ವಾಪಸ್
ಮತ್ತೊಂದು ಬೋಯಿಂಗ್ 787 ತಾಂತ್ರಿಕ ಸಮಸ್ಯೆ : ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್ ವಿಮಾನ ಲಂಡನ್ ಗೆ ವಾಪಸ್
ಇರಾನ್ ಮೇಲೆ ಇಸ್ರೇಲ್ ನಡೆಸಿದ ಇತ್ತೀಚಿನ ದಾಳಿಗಳನ್ನು ಖಂಡಿಸಿ ಎಸ್.ಸಿ.ಓ ಹೇಳಿಕೆಯಿಂದ ದೂರ ಉಳಿದ ಭಾರತ
ಇರಾನ್ ಮೇಲೆ ಇಸ್ರೇಲ್ ನಡೆಸಿದ ಇತ್ತೀಚಿನ ದಾಳಿಗಳನ್ನು ಖಂಡಿಸಿ ಎಸ್.ಸಿ.ಓ ಹೇಳಿಕೆಯಿಂದ ದೂರ ಉಳಿದ ಭಾರತ
ಏರ್ ಇಂಡಿಯಾ ಬೋಯಿಂಗ್ ವಿಮಾನ ಅಪಘಾತದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ : ತನಿಖೆಗಾಗಿ ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ ರಚನೆ
ಏರ್ ಇಂಡಿಯಾ ಬೋಯಿಂಗ್ ವಿಮಾನ ಅಪಘಾತದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ : ತನಿಖೆಗಾಗಿ ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ ರಚನೆ
ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆಗುತ್ತಿದ್ದಾಗ ಏರ್ ಇಂಡಿಯಾ B787 ವಿಮಾನ ಪತನ : ಭಾರಿ ಸಾವುನೋವು ಸಾಧ್ಯತೆ
ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆಗುತ್ತಿದ್ದಾಗ ಏರ್ ಇಂಡಿಯಾ B787 ವಿಮಾನ ಪತನ : ಭಾರಿ ಸಾವುನೋವು ಸಾಧ್ಯತೆ
ಜಾತಿಗಣತಿ ನೆಪದಲ್ಲಿ ಸಿದ್ದರಾಮಯ್ಯ ₹165 ಕೋಟಿ ದುರುಪಯೋಗ ಮಾಡಿದ್ದಾರೆ - ಸುನೀಲಕುಮಾರ
ಜಾತಿಗಣತಿ ನೆಪದಲ್ಲಿ ಸಿದ್ದರಾಮಯ್ಯ ₹165 ಕೋಟಿ ದುರುಪಯೋಗ ಮಾಡಿದ್ದಾರೆ - ಸುನೀಲಕುಮಾರ
ಹಿಂದಿ ಕಲಿಯುವುದರಿಂದ ಉತ್ತರ ರಾಜ್ಯಗಳಲ್ಲಿ ಜನರಿಗೆ ಹೆಚ್ಚಿನ ಅನುಕೂಲ ಮತ್ತು ಅವಕಾಶ ಸಾಧ್ಯ - ಸಿಎಂ ಚಂದ್ರಬಾಬು ನಾಯ್ಡು
ಹಿಂದಿ ಕಲಿಯುವುದರಿಂದ ಉತ್ತರ ರಾಜ್ಯಗಳಲ್ಲಿ ಜನರಿಗೆ ಹೆಚ್ಚಿನ ಅನುಕೂಲ ಮತ್ತು ಅವಕಾಶ ಸಾಧ್ಯ - ಸಿಎಂ ಚಂದ್ರಬಾಬು ನಾಯ್ಡು
ಆಪರೇಷನ್ ಸಿಂಧೂರ್ : ವಿವಿಧ ದೇಶಗಳಿಗೆ ಭೇಟಿ ನೀಡಿದ ವಿವಿಧ ನಿಯೋಗಗಳ ಸದಸ್ಯರ ಆತಿಥ್ಯ ವಹಿಸಿದ ಪ್ರಧಾನಿ ಮೋದಿ
ಆಪರೇಷನ್ ಸಿಂಧೂರ್ : ವಿವಿಧ ದೇಶಗಳಿಗೆ ಭೇಟಿ ನೀಡಿದ ವಿವಿಧ ನಿಯೋಗಗಳ ಸದಸ್ಯರ ಆತಿಥ್ಯ ವಹಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...