Sat,Apr11,2026
ಕನ್ನಡ / English

ಸಂಭಾಲ್‌ ಕಲ್ಲುತೂರಾಟದಲ್ಲಿ 4 ಸಾವು, 20ಕ್ಕೂ ಅಧಿಕ ಭದ್ರತಾ ಸಿಬ್ಬಂದಿ ಗಾಯ :ಶಾಹಿ ಜಾಮಾ ಮಸೀದಿಯಲ್ಲಿ ಹೆಚ್ಚಿನ ಭದ್ರತೆ, ಶಾಲೆ, ಇಂಟರ್ನೆಟ್ ಬಂದ್ | JANATA NEWS

25 Nov 2024

ಸಂಭಾಲ್ : ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಜಾಮಾ ಮಸೀದಿಯ ಭಾನುವಾರ ಸಮೀಕ್ಷೆಯ ಸಂದರ್ಭದಲ್ಲಿ, ಸಮೀಕ್ಷೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ತೀವ್ರಗಾಮಿ ಪ್ರತಿಭಟನಾಕಾರರು ಪೊಲೀಸರೊಂದಿಗೆ ಹಿಂಸಾತ್ಮಕವಾಗಿ ಘರ್ಷಣೆ ನಡೆಸಿ ಕಲ್ಲುತೂರಾಟ ನಡೆಸಿದರು.

ನಿನ್ನೆ ಮಸೀದಿಯ ಸಮೀಕ್ಷೆ ನಡೆಸಲು ಸಮೀಕ್ಷಾ ತಂಡ ಆಗಮಿಸಿದಾಗ ಕಲ್ಲು ತೂರಾಟ ನಡೆದ ಘಟನೆ ನಡೆದ ಬೆನ್ನಲ್ಲೇ ಸಂಭಾಲ್‌ನ ಶಾಹಿ ಜಾಮಾ ಮಸೀದಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಈ ಜಾಗದಲ್ಲಿ ಹರಿಹರ ದೇವಸ್ಥಾನವಿದೆ ಎಂದು ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ ಸರ್ವೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ. ಉತ್ತರ ಪ್ರದೇಶದ ಶಾಹಿ ಜಾಮಾ ಮಸೀದಿಯನ್ನು ತಲುಪಿದ ಸಮೀಕ್ಷಾ ತಂಡದ ಮೇಲೆ ತೀವ್ರಗಾಮಿ ಗುಂಪುಗಳಿಂದ ಭಾರೀ ಕಲ್ಲು ತೂರಾಟ ನಡೆಸಿದ್ದರು.

ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಸುಮಾರು 20 ಭದ್ರತಾ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ, ಎನ್ನಲಾಗಿದೆ.

ಈ ಹಿಂಸಾಚಾರದ ನಂತರ, ಆಡಳಿತವು 12 ನೇ ತರಗತಿಯವರೆಗಿನ ಶಾಲೆಗಳನ್ನು ಮುಚ್ಚಲು ಆದೇಶಿಸಿದೆ. ಇದರೊಂದಿಗೆ, ಇಂಟರ್ನೆಟ್ ಅನ್ನು ನಿಷೇಧಿಸಲಾಗಿದೆ. ದುಷ್ಕರ್ಮಿಗಳನ್ನು ಗುರುತಿಸಲಾಗುತ್ತಿದೆ.

ಸಂಭಾಲ್‌ನಲ್ಲಿ ನ್ಯಾಯಾಲಯ ನೇಮಿಸಿದ ಸರ್ವೇಕ್ಷಣಾ ತಂಡದ ಮೇಲೆ ದಾಳಿಯ ನಂತರ, ಸಾಕ್ಷ್ಯಾಧಾರಗಳ ನಾಶವನ್ನು ಶಂಕಿಸಲಾಗಿದೆ ಎಂದು, ಹಿರಿಯ ಹಿಂದೂ ಪರ ವಕೀಲ ವಿಷ್ಣು ಜೈನ್ ಭಾರತೀಯ ಪುರಾತತ್ವ ಸರ್ವೇಕ್ಷಣೆಯನ್ನು ತಕ್ಷಣವೇ ಸಂಭಾಲ್ ಶ್ರೀ ಹರಿ ಹರ್ ದೇವಸ್ಥಾನದ ನಿಯಂತ್ರಣಕ್ಕೆ ತೆಗೆದುಕೊಳ್ಳುವಂತೆ ವಿನಂತಿಸಿದರು.

ಭಾನುವಾರ ಬೆಳಿಗ್ಗೆ ಸಮೀಕ್ಷೆ ತಂಡವು ಕೆಲಸವನ್ನು ಪ್ರಾರಂಭಿಸಿದಾಗ ಹೆಚ್ಚಿನ ಸಂಖ್ಯೆಯ ಜನರು ಶಾಹಿ ಜಾಮಾ ಮಸೀದಿಯಲ್ಲಿ ಜಮಾಯಿಸಿ, ಅವರು ಅಲ್ಲಿ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಹಿಂಸಾಚಾರ ಪ್ರಾರಂಭವಾಯಿತು.

ಮಸೀದಿಯಲ್ಲಿ ಸಾಮಾನ್ಯವಾಗಿ ಮಧ್ಯಾಹ್ನ ನಡೆಯುವ ಪ್ರಾರ್ಥನೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಬೆಳಿಗ್ಗೆ ಸಮಯದಲ್ಲಿ ಸಮೀಕ್ಷೆ ನಡೆಸಲಾಗಿದೆ ಎಂದು ಜಿಲ್ಲಾ ಅಧಿಕಾರಿಗಳು ತಿಳಿಸಿದ್ದರು.

English summary :4 dead, more than 20 security staff injured in Sambhal stone pelting: High security at Shahi Jama Masjid, school, internet shutdown

ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಋಷಿಕೇಶದಲ್ಲಿ ಸೀಪ್ಲೇನ್ ಪರೀಕ್ಷಾರ್ಥ ಲ್ಯಾಂಡಿಂಗ್ ಉತ್ತರಾಖಂಡ ಪ್ರವಾಸೋದ್ಯಮಕ್ಕೆ ಉತ್ತೇಜನ
ಋಷಿಕೇಶದಲ್ಲಿ ಸೀಪ್ಲೇನ್ ಪರೀಕ್ಷಾರ್ಥ ಲ್ಯಾಂಡಿಂಗ್ ಉತ್ತರಾಖಂಡ ಪ್ರವಾಸೋದ್ಯಮಕ್ಕೆ ಉತ್ತೇಜನ
ಸಾತಂಕುಲಂ ಕಸ್ಟಡಿ ಸಾವು : 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಸಾತಂಕುಲಂ ಕಸ್ಟಡಿ ಸಾವು : 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಹಿಂತೆಗೆತವಿಲ್ಲ ಎಂದು ಸುಪ್ರೀಂ ಸೂಚನೆ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳು ಉಳಿಯಲಿವೆ
ಹಿಂತೆಗೆತವಿಲ್ಲ ಎಂದು ಸುಪ್ರೀಂ ಸೂಚನೆ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳು ಉಳಿಯಲಿವೆ

ನ್ಯೂಸ್ MORE NEWS...