Wed,Jul15,2026
ಕನ್ನಡ / English

ರಾಜ್ಯದ ಮಾವು ಬೆಳೆಗಾರ ರೈತರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ : 2,50,000 ಮೆಟ್ರಿಕ್ ಟನ್ ಮಾವಿನಹಣ್ಣಿನ ಖರೀದಿಗೆ ಅನುಮೋದನೆ | JANATA NEWS

24 Jun 2025

ನವದೆಹಲಿ : ರಾಜ್ಯದಲ್ಲಿ ಮಾವಿನ ಹಣ್ಣಿನ ಬೆಲೆ ಕುಸಿತದಿಂದ ಕಂಗಾಲಾಗಿದ್ದ ರೈತರ ನೆರವಿಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಬೆಂಬಲ ಬೆಲೆ ಘೋಷಿಸಿದೆ. ಈ ಮೂಲಕ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಪ್ರಯತ್ನ ರೈತರಿಗೆ ಸಿಹಿ ನೀಡಿದೆ. ರಾಜ್ಯದ ಮಾವಿನಹಣ್ಣುಗಳಿಗೆ ಆಂಧ್ರಪ್ರದೇಶ ನಿಷೇಧ ಹೇರಿದ್ದರಿಂದ ರಾಜ್ಯದಲ್ಲಿ ಮಾವು ಬೆಲೆ ತೀವ್ರ ಕುಸಿತವಾಗಿತ್ತು.

ಮಾವಿನ ಹಣ್ಣನ್ನು ರಸ್ತೆಗೆ ಸುರಿದು ಪ್ರತಿಭಟನೆಗೆ ಮುಂದಾಗಿದ್ದ ರಾಜ್ಯದ ಮಾವು ಬೆಳೆಗಾರರ ಕಷ್ಟವನ್ನು ಆಲಿಸಿದ ಕುಮಾರಸ್ವಾಮಿ ನೆರವಿಗೆ ಧಾವಿಸುವಂತೆ ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ಗೆ ಪತ್ರ ಬರೆದಿದ್ದರು.

ಜೂನ್ 24ರಂದು, ಕೃಷಿ ಮತ್ತು ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಭಾರೀ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಉತ್ತರ ನೀಡಿ ಪತ್ರ ಬರೆದಿದ್ದಾರೆ. ಕರ್ನಾಟಕ ಮತ್ತು ನೆರೆಯ ರಾಜ್ಯಗಳಲ್ಲಿನ ಮಾರುಕಟ್ಟೆ ಪರಿಸ್ಥಿತಿಗಳಿಂದಾಗಿ ಮಾವಿನ ರೈತರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ನೀವು ಬರೆದ ಪತ್ರ ಗಮನಕ್ಕೆ ಬಂದಿದೆ ಎಂದಿದ್ದು, ಕ್ವಿಂಟಲ್‌ಗೆ ರೂ. 1616 ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆಯಲ್ಲಿ ಗರಿಷ್ಠ 2,50,000 ಮೆಟ್ರಿಕ್ ಟನ್ ಮಾವಿನಹಣ್ಣಿನ ಖರೀದಿಗೆ ಅನುಮೋದಿಸಲಾಗಿದೆ, ಎಂದು ತಿಳಿಸಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಕರ್ನಾಟಕದಲ್ಲಿ 2025-26 ರ ಮಾರುಕಟ್ಟೆ ವರ್ಷಕ್ಕೆ ಮಾವಿನಹಣ್ಣಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ (ಎಂಐಎಸ್) ಅನ್ನು ಅನುಮೋದಿಸಿದೆ. ಈ ಯೋಜನೆಯಡಿಯಲ್ಲಿ, ಕ್ವಿಂಟಲ್‌ಗೆ ರೂ. 1616 ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆಯಲ್ಲಿ ಗರಿಷ್ಠ 2,50,000 ಮೆಟ್ರಿಕ್ ಟನ್ ಮಾವಿನಹಣ್ಣಿನ ಖರೀದಿಗೆ ಅನುಮೋದಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಮಧ್ಯಸ್ಥಿಕೆ ಪರಿಹಾರವನ್ನು ನೀಡುತ್ತದೆ ಮತ್ತು ಕರ್ನಾಟಕದ ಮಾವಿನ ರೈತರ ಕಲ್ಯಾಣಕ್ಕಾಗಿ ಕುಮಾರಸ್ವಾಮಿ ಅವರು ಎತ್ತಿದ ನಿಜವಾದ ಕಳವಳಗಳನ್ನು ಪರಿಹರಿಸುತ್ತದೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಅವರು ಆಶಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇದಕ್ಕೆ ಧನ್ಯವಾದ ತಿಳಿಸಿರುವ ಕುಮಾರಸ್ವಾಮಿ, 'ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಸರಕಾರದ ರೈತಪರ ಬದ್ಧತೆ, ಅಚಲತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮನವಿ ಮಾಡಿದ ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ (Market Intervention Scheme-MIS) ಅಡಿಯಲ್ಲಿ ಬೆಂಬಲ ಬೆಲೆ ಘೋಷಿಸಿದ್ದಕ್ಕಾಗಿ ಕೇಂದ್ರದ ಕೃಷಿ ಸಚಿವರಾದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಕರ್ನಾಟಕದ ಮಾವು ಬೆಳೆಗಾರರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನರೇಂದ್ರ ಮೋದಿ ಅವರ ಆಡಳಿತದಲ್ಲಿ ರೈತರ ಉತ್ಪನ್ನಗಳಿಗೆ ಸ್ಥಿರ ಬೆಲೆಯ ಖಾತರಿ ಸದಾ ಇರುತ್ತದೆ ಎಂಬುದನ್ನು ಈ ಉಪಕ್ರಮವು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಟ್ವೀಟ್‌ ಮಾಡಿದ್ದಾರೆ.

English summary :Central govt rushed to the aid of the state mango growers: Approval for the purchase of 250,000 metric tons of mangoes

ಅಪರೂಪದ ಭೂಮಿ-ಮುಕ್ತ ವಿದ್ಯುತ್ ಮೋಟಾರ್ ತಂತ್ರಜ್ಞಾನ ಬೆಂಗಳೂರು ಸ್ಟಾರ್ಟ್ಅಪ್ ದಿಂದ ಅನಾವರಣ
ಅಪರೂಪದ ಭೂಮಿ-ಮುಕ್ತ ವಿದ್ಯುತ್ ಮೋಟಾರ್ ತಂತ್ರಜ್ಞಾನ ಬೆಂಗಳೂರು ಸ್ಟಾರ್ಟ್ಅಪ್ ದಿಂದ ಅನಾವರಣ
2028–29 ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸ್ಥಾನಕ್ಕಾಗಿ ಅಭಿಯಾನ ಪ್ರಾರಂಭಿಸಿದ ಭಾರತ
2028–29 ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸ್ಥಾನಕ್ಕಾಗಿ ಅಭಿಯಾನ ಪ್ರಾರಂಭಿಸಿದ ಭಾರತ
ಬಿಡದಿಯಲ್ಲಿ ಭೂ ಸಮೀಕ್ಷೆಗೆ ಅಡ್ಡಿಪಡಿಸಿದ ಮಹಿಳಾ ರೈತರು, ಅಧಿಕಾರಿಗಳ ಮೇಲೆ ಪೊರಕೆಗಳಿಂದ ಹಲ್ಲೆ
ಬಿಡದಿಯಲ್ಲಿ ಭೂ ಸಮೀಕ್ಷೆಗೆ ಅಡ್ಡಿಪಡಿಸಿದ ಮಹಿಳಾ ರೈತರು, ಅಧಿಕಾರಿಗಳ ಮೇಲೆ ಪೊರಕೆಗಳಿಂದ ಹಲ್ಲೆ
ಭಾರತವು ತ್ವರಿತ ಅಮೆರಿಕದ ವ್ಯಾಪಾರ ಒಪ್ಪಂದವನ್ನು ತಿರಸ್ಕರಿಸಿದೆ ಎಂಬ ವರದಿಗಳನ್ನು  ತಳ್ಳಿಹಾಕಿದ ಪಿಯೂಷ್ ಗೋಯಲ್
ಭಾರತವು ತ್ವರಿತ ಅಮೆರಿಕದ ವ್ಯಾಪಾರ ಒಪ್ಪಂದವನ್ನು ತಿರಸ್ಕರಿಸಿದೆ ಎಂಬ ವರದಿಗಳನ್ನು ತಳ್ಳಿಹಾಕಿದ ಪಿಯೂಷ್ ಗೋಯಲ್
 ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ 27 ಸಾವು, 22 ಗಾಯ
ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ 27 ಸಾವು, 22 ಗಾಯ
ಶ್ರೀ ರಾಮ ಮಂದಿರದಲ್ಲಿ ದೇಣಿಗೆ ಅಕ್ರಮ :  ಪ್ರಸ್ತುತ ಎಸ್ಐಟಿ ಮತ್ತು ಪೊಲೀಸ್ ಕ್ರಮದ ಬಗ್ಗೆ ವಿಶ್ವಾಸ - ಆರಎಸ್ಎಸ್
ಶ್ರೀ ರಾಮ ಮಂದಿರದಲ್ಲಿ ದೇಣಿಗೆ ಅಕ್ರಮ : ಪ್ರಸ್ತುತ ಎಸ್ಐಟಿ ಮತ್ತು ಪೊಲೀಸ್ ಕ್ರಮದ ಬಗ್ಗೆ ವಿಶ್ವಾಸ - ಆರಎಸ್ಎಸ್
 ಜಾಗತಿಕ ಇಂಧನ ವ್ಯಾಪಾರದ ಬದಲಾವಣೆ : ರಷ್ಯಾಕ್ಕೆ ಪೆಟ್ರೋಲ್ ರಫ್ತು ಮಾಡುತ್ತಿರುವ ಭಾರತ
ಜಾಗತಿಕ ಇಂಧನ ವ್ಯಾಪಾರದ ಬದಲಾವಣೆ : ರಷ್ಯಾಕ್ಕೆ ಪೆಟ್ರೋಲ್ ರಫ್ತು ಮಾಡುತ್ತಿರುವ ಭಾರತ
ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು

ನ್ಯೂಸ್ MORE NEWS...