Sat,Apr11,2026
ಕನ್ನಡ / English

ನಿಮ್ಮ ವಿದ್ಯೆಗೆ ಮೀರಿ ನಿಮಗೆ ಖಾತೆ ಕೊಟ್ಟಿದ್ದಾರೆ, ಖಾತೆಗೆ ಸ್ವಲ್ಪ ಸಮಯವನ್ನು ವಿನಿಯೋಗ ಮಾಡಿ - ಸಚಿವ ಖರ್ಗೆ ಗೆ ಮಾಜಿ ಸಂಸದ ಸಿಂಹ ಕಿವಿಮಾತು | JANATA NEWS

07 Jul 2025

ಬೆಂಗಳೂರು : ಆರ್ಎಸ್ಎಸ್ ಬ್ಯಾನ್ ಮಾಡುವ ಬಗ್ಗೆ ಮಾತನಾಡುವ ಮೂಲಕ ನಿರಂತರ ಟೀಕೆಗೆ ಗುರಿಯಾಗಿರುವ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಮಾಜಿ ಸಂಸದ ಹಾಗೂ ಬಿಜೆಪಿ ನಾಯಕ ಪ್ರತಾಪ ಸಿಂಹ ಅವರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ಮದ್ಯಮದೊಂದಿಗೆ ಈ ಕುರಿತು ಮಾತನಾಡಿರುವ ಅವರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

"2.5ವರ್ಷ ಆಯ್ತು ಈ ಸರ್ಕಾರ ಅಧಿಕಾರಕ್ಕೆ ಬಂದು... ಪ್ರಿಯಾಂಕಾ ಖರ್ಗೆ ಅವರು ತಮ್ಮ ಇಲಾಖೆ ಬಗ್ಗೆ ಮಾತಾಡಿದ್ದೇ ಇಲ್ಲ, ತಾವು ಮಾಡಿದಂತಹ ಸಾಧನೆ ಬಗ್ಗೆ ಹೇಳಿಕೊಂಡಿದ್ದೇ ಇಲ್ಲ. ವರ್ಷದಲ್ಲಿ 100 ಸಾರಿ ಪತ್ರಿಕಾಗೋಷ್ಠಿ ನಡೆಸಿದರೂ ಬಿಜೆಪಿ ಯನ್ನು ಬೈಯ್ಯೋವಂತದ್ದು.. ಆರ್ಎಸ್ಎಸ್ ಬಗ್ಗೆ ಅವಾಚ್ಯ ಶಬ್ದದಿಂದ ನಿಂದಿಸೊವಂತದ್ದು. ಇದು ಬಿಟ್ರೆ ಏನು ಕೂಡ ಅವರ ಬಾಯಿಂದ ಹೊರಗೆ ಬರೆದಿಲ್ಲ. .. ಸದನದ ಒಳಗೆ ಫೈಲ್ಸ ಪ್ರಿಯಾಂಕಾ, ಸದನದ ಹೊರಗೆ ಕೂಗುಮಾರಿ ಪ್ರಿಯಾಂಕಾ ಆಗಿ ಬಿಡ್ತೀರಿ." ಎಂದು ಹೀಯಾಳಿಸಿದ್ದಾರೆ.

"ಎನ್ ಸರ್ ನೀವು ಆರ್‌ಎಸ್‌ಎಸ್ ಬ್ಯಾನ್ ಮಾಡ್ತೀರಾ? ನೀವು ಯಾರ ಮಗಳ ಹೆಸರು ಇಟ್ಕೊಂಡಿದ್ದರಲ್ಲ ಆ ರಾಜೀವ್ ಗಾಂಧಿ ಕೂಡ ದೇಶವನ್ನು ಅಳಿದರೂ ಅವರ ಕೈಯಲ್ಲೇ ಆಗಿಲ್ಲ. ರಾಜೀವ್ ಗಾಂಧಿಯನ್ನು ಹೆತ್ತ ಅಂತಹ ಇಂದಿರಾ ಗಾಂಧಿ 16 ವರ್ಷ ದೇಶ ಅಳಿದರೂ ಅವರು ಬ್ಯಾನ್ ಮಾಡಿದ್ರು, ಆದರೆ ಬಳಿಕ ಅಧಿಕಾರ ಕಳೆದುಕೊಂಡರು. ಆರ್ಎಸ್ಎಸ್ ಮಾತ್ರ ತನ್ನ ಸಮಾಜ ಸೇವೆ ಮುಂಡುವರೆಸುತ್ತಾ ಹೋಯ್ತು. ಇಂದಿರಾ ಗಾಂಧಿಗೆ ಜನ್ಮ ಕೊಟ್ಟಂತಹ ನೆಹರೂ ಕೂಡ 17 ವರ್ಷ ಅಳಿದರೂ, ಬ್ಯಾನ್ ಮಾಡಿ ನಂತರ ಬ್ಯಾನ್ ವಾಪಸ್ ತೆಗೆದುಕೊಳ್ಳುವ ಅನಿವಾರ್ಯತೆ ಬಂತು... 1962ರ ಚೀನಾ ಯುದ್ಧದಲ್ಲಿ ಆರ್ಎಸ್ಎಸ್ ಸೇವೆಯನ್ನು ಶ್ಲಾಘಿನೆ ಮಾಡುವಂತ ಅನಿವಾರ್ಯತೆ ಬಂತು. ನೆಹರೂ ಅವರ ಮರಿಮಗಳ ಹೆಸರು ಇಟ್ಕೊಂಡು ಏನು ಮಾಡಲು ಸಾಧ್ಯವಿಲ್ಲ. ಹೆಸರಿನಲ್ಲೂ ಸ್ವಂತಂತೆ ಇಲ್ಲ. ಖರ್ಗೆ ಕೂಡ ನಿಮ್ಮ ತಂದೆ ಇಂದ ಬಂದ ಬಳುವಳಿ... ವ್ಯಕ್ತಿತ್ವದಲ್ಲೂ ಸ್ವಂತತೆ ಇಲ್ಲ..." ಎಂದು ವಾಗ್ದಾಳಿ ನಡೆಸಿದ್ದಾರೆ.

ಐಟಿಬಿಟಿ ಸಚಿವರಾಗಿ ನಿಮ್ಮ ಸಾಧನೆ ಹೇಳಿ. ಬೇರೆ ರಾಜ್ಯಗಳಿಗೆ ಕಂಪನಿಗಳು ಯಾಕೆ ಹೋಗುತ್ತಿದೆ ಏಕೆ. ನಿಮ್ಮ ಅಪ್ಪ ದೊಡ್ಡ ದೊಡ್ಡ ನಾಯಕರನ್ನ ಬಲಿ ಕೊಟ್ಟು, ಅವರ ಮುಖ್ಯಮಂತ್ರಿ ಆಸೆಯನ್ನು ಬಳಿಕೊಟ್ಟು ನಿಮ್ಮನ್ನ ಮಂತ್ರಿ ಮಾಡಿದ್ದಾರೆ... ಇದೇ ರೀತಿ ಕೂಗು ಮಾರಿ ರೀತಿ ಮಾತನಾಡುತ್ತಿದ್ರೆ, ನಿಮ್ಮನ್ನ ಯಾರೂ ಮುಖ್ಯಮಂತ್ರಿ ಮಾಡಲ್ಲ. ನಿಮ್ಮಪ್ಪನ್ನೇ ಕಾಂಗ್ರೆಸ್ ಮುಖ್ಯಮಂತ್ರಿ ಮಾಡಲಿಲ್ಲ. ಇನ್ನೂ ನಿಮ್ಮನ್ನು ಮಾಡುತ್ತಾ? ಇದನ್ನೆಲ್ಲಾ ಬಿಟ್ಟುಬಿಡಿ ಸರ್. ಆರ್‌ಎಸ್‌ಎಸ್ ಅನ್ನು ಬೈದ್ರೆ ಅಧಿಕಾರ ಸಿಗಲ್ಲ, ಎಂದು ಟೀಕಿಸಿದ್ದಾರೆ.

"ನಿಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ಮಾತಾಡಿ. ನಿಮ್ಮ ವಿದ್ಯೆಗೆ ಮೀರಿ ನಿಮಗೆ ಈ ಖಾತೆ ಕೊಟ್ಟಿದ್ದಾರೆ. ಆ ಖಾತೆಗೆ ಸ್ವಲ್ಪ ಸಮಯವನ್ನು ವಿನಿಯೋಗ ಮಾಡಿ ಒಳ್ಳೆ ಕೆಲಸ ಮಾಡಿ ಸರ್", ಎಂದು ಕಿವಿಮಾತು ಹೇಳಿದ್ದಾರೆ.

"ಸಿದ್ದರಾಮಯ್ಯ ನವರು ಯುವನಿದಿ ಕೊಡುತ್ತೇನೆ ಎಂದು ಬೊಬ್ಬೆ ಹೊಡೆದು ಎರಡೂವರೆ ವರ್ಷ ಆಯ್ತು ಇಲ್ಲಿವರೆಗೂ ಪ್ರಾರಂಭನೆ ಮಾಡಿಲ್ಲ... ಹೀಗಿರುವಾಗ ಇಲಾಖೆ ಇಂದ ಏನಾದರೂ ಸಹಕಾರ ಮಾಡುವ ಬಗ್ಗೆ ಯೋಚನೆ ಮಾಡಿ ಸರ್" ಎಂದು ಹೇಳಿದ್ದಾರೆ.

English summary :You have been given account beyond your education, spend some time on the account - Former MP Singh advises Minister Kharge.

ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಋಷಿಕೇಶದಲ್ಲಿ ಸೀಪ್ಲೇನ್ ಪರೀಕ್ಷಾರ್ಥ ಲ್ಯಾಂಡಿಂಗ್ ಉತ್ತರಾಖಂಡ ಪ್ರವಾಸೋದ್ಯಮಕ್ಕೆ ಉತ್ತೇಜನ
ಋಷಿಕೇಶದಲ್ಲಿ ಸೀಪ್ಲೇನ್ ಪರೀಕ್ಷಾರ್ಥ ಲ್ಯಾಂಡಿಂಗ್ ಉತ್ತರಾಖಂಡ ಪ್ರವಾಸೋದ್ಯಮಕ್ಕೆ ಉತ್ತೇಜನ
ಸಾತಂಕುಲಂ ಕಸ್ಟಡಿ ಸಾವು : 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಸಾತಂಕುಲಂ ಕಸ್ಟಡಿ ಸಾವು : 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಹಿಂತೆಗೆತವಿಲ್ಲ ಎಂದು ಸುಪ್ರೀಂ ಸೂಚನೆ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳು ಉಳಿಯಲಿವೆ
ಹಿಂತೆಗೆತವಿಲ್ಲ ಎಂದು ಸುಪ್ರೀಂ ಸೂಚನೆ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳು ಉಳಿಯಲಿವೆ

ನ್ಯೂಸ್ MORE NEWS...