Sat,Aug08,2026
ಕನ್ನಡ / English

ನಮ್ಮ-ಮೆಟ್ರೋ ದರ ಏರಿಕೆ : ವರದಿ ಬಹಿರಂಗ ಕೋರಿ ಸಂಸದ ಸೂರ್ಯ ರಿಂದ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ; ಬಿಎಂಆರ್‌ಸಿಎಲ್‌ ಗೆ ನೋಟಿಸ್ | JANATA NEWS

07 Jul 2025

ಬೆಂಗಳೂರು : ನಮ್ಮ ಮೆಟ್ರೋ ದರ ಏರಿಕೆಗೆ ಕಾರಣ ನೀಡುವಲ್ಲಿ ಮುಚ್ಚುಮರೆ ಮಾಡುತ್ತಿರುವ ಆರೋಪ ಎದುರಿಸುತ್ತಿರುವ ಬೆನ್ನಲ್ಲೇ, ಇದೇ ವಿಷಯಕ್ಕೆ ಸಂಬಂಧಪಟ್ಟಂತೆ ಈಗ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್‌ಗೆ (BMRCL) ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿ 2 ವಾರದಲ್ಲಿ ಉತ್ತರಿಸುವಂತೆ ಸೂಚಿಸಿದೆ.

"ಶುಲ್ಕ ನಿಗದಿ ಸಮಿತಿ ವರದಿಯನ್ನು ಬಿಡುಗಡೆ/ಪ್ರಕಟಣೆ ಮಾಡುವಂತೆ ಕೋರಿ ನಾನು ಸಲ್ಲಿಸಿದ ರಿಟ್ ಅರ್ಜಿಗೆ ಪ್ರತಿಕ್ರಿಯೆಯಾಗಿ ಕರ್ನಾಟಕದ ಹೈಕೋರ್ಟ್ ಬಿಎಂಆರ್‌ಸಿಎಲ್‌ಗೆ ನೋಟಿಸ್ ಜಾರಿ ಮಾಡಿದೆ", ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

"ಪದೇ ಪದೇ ಪತ್ರಗಳು, ಬೇಡಿಕೆಗಳು ಮತ್ತು ಸಾರ್ವಜನಿಕ ಆಕ್ರೋಶದ ಹೊರತಾಗಿಯೂ, ಪಾರದರ್ಶಕತೆಯನ್ನು ಎತ್ತಿಹಿಡಿಯುವಲ್ಲಿ ಹಸ್ತಕ್ಷೇಪ ಮಾಡುವಂತೆ ಕೋರಿ ನಾನು ಹೈಕೋರ್ಟ್ ಅನ್ನು ಸಂಪರ್ಕಿಸಬೇಕಾಗಿ ಬಂದಿರುವುದು ದುರದೃಷ್ಟಕರ."

"ಸಾರ್ವಜನಿಕ ಅಧಿಕಾರಿಗಳು ಮಾಹಿತಿ ಪ್ರವೇಶಕ್ಕಾಗಿ ನಾಗರಿಕರನ್ನು ಹೈಕೋರ್ಟ್‌ಗಳನ್ನು ಸಂಪರ್ಕಿಸುವಂತೆ ಒತ್ತಾಯಿಸಿದಾಗ, ಅದು ವ್ಯವಸ್ಥಿತ ಆಡಳಿತ ವೈಫಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಚುನಾಯಿತ ಸಂಸದರು ತಮ್ಮ ಬಾಗಿಲು ತಟ್ಟುತ್ತಿದ್ದಾರೆ ಎಂಬ ನ್ಯಾಯಾಲಯದ ಅವಲೋಕನವು ಈ ಪರಿಸ್ಥಿತಿಯನ್ನು ದೃಢೀಕರಿಸುತ್ತದೆ. ಮುಂದಿನ ವಿಚಾರಣೆ ಎರಡು ವಾರಗಳಲ್ಲಿ. ನಿಮ್ಮೆಲ್ಲರನ್ನೂ ತಿಳಿಸಲಾಗುವುದು. ಈಗಲೂ ಸಹ ರಾಜ್ಯ ಸರ್ಕಾರ ವರದಿಯನ್ನು ಬಿಡುಗಡೆ ಮಾಡಲು ತಡವಾಗಿಲ್ಲ.", ಎಂದು ಸಂಸದ ಸೂರ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬೆಂಗಳೂರಿನ ಇನ್ನೊಬ್ಬ ಸಂಸದ ಪಿಸಿ ಮೋಹನ್ ಅವರು ಈ ಕುರಿತು ಹೇಳಿದ್ದು, "ಪಾರದರ್ಶಕತೆಗೆ ಕರ್ನಾಟಕ ಹೈಕೋರ್ಟ್‌ನ ಆದೇಶಗಳು ಬೇಕಾಗಿಲ್ಲ. ಬೆಂಗಳೂರಿನ ಪ್ರಯಾಣಿಕರು ದರಗಳನ್ನು ಹೇಗೆ ನಿಗದಿಪಡಿಸಲಾಗುತ್ತದೆ ಎಂಬುದನ್ನು ತಿಳಿದುಕೊಳ್ಳಲು ಅರ್ಹರು. ಬಿಎಂಆರ್‌ಸಿಎಲ್ ಈಗಲೇ ಶುಲ್ಕ ನಿಗದಿ ಸಮಿತಿ ವರದಿಯನ್ನು ಬಿಡುಗಡೆ ಮಾಡಬೇಕು. ಸಾರ್ವಜನಿಕ ನಂಬಿಕೆಯನ್ನು ರಹಸ್ಯ, ಮೌನ ಅಥವಾ ಕಲ್ಲುತೂರಾಟದ ಮೂಲಕ ನಿರ್ಮಿಸಲಾಗುವುದಿಲ್ಲ, ಮುಕ್ತತೆಯ ಮೂಲಕ ನಿರ್ಮಿಸಲಾಗುತ್ತದೆ.", ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಶುಲ್ಕ ನಿಗದಿ ಸಮಿತಿ ವರದಿಯನ್ನು ಬಹಿರಂಗ ಪಡಿಸುವಂತೆ ಕೋರಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು ನಡೆಯಿತು.

ವಿಚಾರಣೆ ವೇಳೆ, ನೀವಿಷ್ಟು ಪ್ರಬಲರಾಗಿದ್ದೂ ನಿಮಗೆ ವರದಿ ಸಿಗುತ್ತಿಲ್ಲವೇ ಎಂದು ನ್ಯಾಯಮೂರ್ತಿಗಳು ತೇಜಸ್ವಿ ಸೂರ್ಯ ಪರ ವಕೀಲರಿಗೆ ಪ್ರಶ್ನಿಸಿದರು. ಡಿಸೆಂಬರ್ ತಿಂಗಳಲ್ಲೇ ದರ ನಿಗದಿ ಸಮಿತಿ ವರದಿ ನೀಡಿದ್ದರೂ ಬಿಎಂಆರ್‌ಸಿಎಲ್‌ ವರದಿ ನೀಡುತ್ತಿಲ್ಲ. ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಿದ್ದರೂ ಸಮಿತಿ ವರದಿ ಬಹಿರಂಗಪಡಿಸಿಲ್ಲ ಎಂದು ವಕೀಲರು ಉತ್ತರಿಸಿದರು. ಕೊನೆಗೆ ಬಿಎಂಆರ್‌ಸಿಎಲ್‌ಗೆ ನೋಟಿಸ್‌ ಜಾರಿ ಮಾಡಿದ ಕೋರ್ಟ್‌ ಅರ್ಜಿ ವಿಚಾರಣೆಯನ್ನು 2 ವಾರ ಮುಂದೂಡಿಕೆ ಮಾಡಿತು, ಎಂದು ವರದಿಯಾಗಿದೆ.

English summary :Namma Metro fare hike: MP Surya files a writ petition in High Court seeking public report; notice to BMRCL

ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ತ್ರಿಪಕ್ಷೀಯ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ
ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ತ್ರಿಪಕ್ಷೀಯ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ
ಎಫ್.ಸಿ.ಆರ್.ಎ ಆಂತರಿಕ ಶಾಸಕಾಂಗ ವಿಷಯ : ವಿದೇಶಿ ಟೀಕೆಗಳನ್ನು ತಿರಸ್ಕರಿಸಿದ  ಭಾರತ
ಎಫ್.ಸಿ.ಆರ್.ಎ ಆಂತರಿಕ ಶಾಸಕಾಂಗ ವಿಷಯ : ವಿದೇಶಿ ಟೀಕೆಗಳನ್ನು ತಿರಸ್ಕರಿಸಿದ ಭಾರತ
ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ  ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ನ್ಯೂಸ್ MORE NEWS...