Sat,Aug08,2026
ಕನ್ನಡ / English

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ | JANATA NEWS

08 Sep 2025

ನವದೆಹಲಿ : ಸಮಸ್ಯೆ ಹೇಳಿಕೊಂಡು ಬಂದ ರೈತನ ವಿರುದ್ಧ ಕಾಂಗ್ರೆಸ್ ಪಕ್ಷದ(ಎಐಸಿಸಿ) ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗದರಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದ್ದು, ರೈತರ ವಿರುದ್ಧ ಖರ್ಗೆಯವರ ಧೋರಣೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಈ ಘಟನೆಗೆ ಪ್ರತಿಕ್ರಯಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕಾಂಗ್ರೆಸ್ ನ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಖರ್ಗೆ ಅವರನ್ನು ಉದ್ದೇಶಿಸಿ ಬುದ್ಧಿವಾದ ನೀಡಿದ್ದು,

"ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರೇ, ರೈತರ ಬಗ್ಗೆ ನಿಮ್ಮ ನಡವಳಿಕೆ ಕಂಡು ಬಹಳ ಬೇಸರವಾಯಿತು. ನಿಮ್ಮಂತಹ ಹಿರಿಯರಿಂದ ಇಂಥ ವರ್ತನೆಯನ್ನು ನಾನು ಖಂಡಿತ ನಿರೀಕ್ಷೆ ಮಾಡಿರಲಿಲ್ಲ. ಕಷ್ಟದಲ್ಲಿರುವ ರೈತ ನಿಮ್ಮಂಥವರ ಬಳಿ ಬಂದು ದುಃಖ ತೋಡಿಕೊಳ್ಳದೆ ಇನ್ನು ಯಾರ ಬಳಿ ಹೋಗಿ ಹೇಳಿಕೊಳ್ಳಬೇಕು?"

"ನೀವು ರಾಜ್ಯಸಭೆ ಪ್ರತಿಪಕ್ಷ ನಾಯಕರು ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರು. ಇದೆಲ್ಲವನ್ನೂ ತಾವು ಮರೆತು ಮಾತನಾಡಿದ್ದೀರಿ! ಇದು ತಮಗೆ ಭೂಷಣವಲ್ಲ. ದುಃಖ ಹೇಳಿಕೊಳ್ಳಲು ಬಂದ ರೈತನ ಮೇಲೆ ಈ ಪರಿಯ ದರ್ಪ ಅಗತ್ಯವಿರಲಿಲ್ಲ. ನೀವೂ ತೊಗರಿ ರೈತರೇ ಆಗಿರಬಹುದು. ಆದರೆ 40 ಎಕರೆಯಲ್ಲಿ ಬೆಳೆಯುವ ತಮಗೂ, ಒಂದು ಅಥವಾ ಎರಡು ಎಕರೆಯಲ್ಲಿ ಬೆಳೆಯುವ ಆ ಬಡರೈತನಿಗೂ ಹೋಲಿಕೆಯೇ? ನಷ್ಟವನ್ನು ಭರಿಸುವ ಶಕ್ತಿ ನಿಮಗಿರುತ್ತದೆ, ರೈತನಿಗೆ ಆ ಶಕ್ತಿ ಇರಬೇಕಲ್ಲವೇ?"

"ನಿನ್ನದು 4 ಎಕ್ರೆ ಹಾಳಾಗಿದೆ. ನನ್ನದು 40 ಎಕ್ರೆ ಹಾಳಾಗಿದೆ. ಪ್ರಚಾರಕ್ಕಾಗಿ ತೊಗರಿ ತೆಗೆದುಕೊಂಡು ಬಂದ್ದಿದ್ದೀಯ? ತೊಗರಿ ಅಷ್ಟೆ ಅಲ್ಲ; ಉದ್ದು, ಹೆಸರು ಕೂಡ ಹಾಳಾಗಿರುವುದು ನನಗೆ ಗೊತ್ತಿದೆ. ಆರು ಹಡೆದವಳ ಮುಂದೆ ಮೂರು ಹಡೆದವಳು ಹೇಳಿದಂತಾಯಿತು.."

"ಹೀಗೆಂದರೇನು ಖರ್ಗೆಯವರೇ? ಹಿರಿಯರು ತಾವೇ ಹೇಳಬೇಕು. ರೈತನನ್ನು ಅಪಮಾನಿಸಿದ್ದೀರಿ. ಜತೆಗೆ, ತಾಯಿಯನ್ನು ಅಪಮಾನಿಸಿದ್ದೀರಿ! ಇದು ಸರಿಯಲ್ಲ. ಕೊನೇಪಕ್ಷ ಆ ವ್ಯಕ್ತಿಗೆ ಸಾಂತ್ವನ ಹೇಳಿ, ಆತನ ಕಣ್ಣೀರು ಒರೆಸಬಹುದಿತ್ತು."

"ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ" ಎಂದು ಎಚ್‌ಡಿ ಕುಮಾರಸ್ವಾಮಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡರು.

ಕಲಬುರಗಿಯ ತಮ್ಮ ನಿವಾಸದಲ್ಲಿ ಖರ್ಗೆ ಮಾಧ್ಯಮದವರೊಂದಿಗೆ ಮಾತನಾಡುವ ಸಂದರ್ಭದಲ್ಲಿ ರೈತರೊಬ್ಬರು (Farmer) ಬಂದು ಸರ್ ತೊಗರಿ ಬೆಳೆ ಹಾನಿಯಾಗಿದೆ. ನಷ್ಟ ಉಂಟಾಗಿದೆ ಎಂದು ಅಳಲುತೊಡಿಕೊಂಡಿದ್ದಾರೆ. ಈ ವೇಳೆ, ಗರಂ ಆದ ಖರ್ಗೆ, ನಿನ್ನದು 4 ಎಕ್ರೆ ಹಾಳಾಗಿದೆ. ನನ್ನದು 40 ಎಕ್ರೆ ಹಾಳಾಗಿದೆ. ಪ್ರಚಾರಕ್ಕಾಗಿ ತೊಗರಿ ತೆಗೆದುಕೊಂಡು ಬಂದ್ದಿದ್ದೀಯಾ? ತೊಗರಿ ಅಷ್ಟೆ ಅಲ್ಲ, ಉದ್ದು, ಹೆಸರು ಕೂಡ ಹಾಳಾಗಿದ್ದು ನನಗೆ ಗೊತ್ತಿದೆ. 6 ಹಡೆದವಳ ಮುಂದೆ ಮೂರು ಹಡೆದವಳು ಹೇಳಿದಂತಾಯಿತು, ಎಂದು ವ್ಯಕ್ತಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ, "ಹೋಗಿ ಮೋದಿ, ಶಾ ಗೆ ಕೇಳಿ" ಅಂತ ಹೇಳಿದ್ದಾರೆ. ಸಮಸ್ಯೆ ಹೇಳಿಕೊಂಡು ಬಂದ ರೈತರೊಂದಿಗೆ ಖರ್ಗೆ ನಡೆದುಕೊಂಡ ರೀತಿಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.

English summary :Your behavior is evidence of the Congress partys traditional arrogance and pride - HDK took Kharge to task

ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ತ್ರಿಪಕ್ಷೀಯ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ
ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ತ್ರಿಪಕ್ಷೀಯ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ
ಎಫ್.ಸಿ.ಆರ್.ಎ ಆಂತರಿಕ ಶಾಸಕಾಂಗ ವಿಷಯ : ವಿದೇಶಿ ಟೀಕೆಗಳನ್ನು ತಿರಸ್ಕರಿಸಿದ  ಭಾರತ
ಎಫ್.ಸಿ.ಆರ್.ಎ ಆಂತರಿಕ ಶಾಸಕಾಂಗ ವಿಷಯ : ವಿದೇಶಿ ಟೀಕೆಗಳನ್ನು ತಿರಸ್ಕರಿಸಿದ ಭಾರತ
ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ  ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ನ್ಯೂಸ್ MORE NEWS...