Mon,Dec15,2025
ಕನ್ನಡ / English

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ | JANATA NEWS

08 Oct 2025

ಬೆಂಗಳೂರು : ಕನ್ನಡದ ಸುಪ್ರಸಿದ್ಧ ಚಲನಚಿತ್ರ ನಟ ಕಿಚ್ಚ ಸುದೀಪ್ ನೇತ್ರತ್ವದ ಕನ್ನಡ ಬಿಗ್ ಬಾಸ್ ಸೀಸನ್ 12 ಕ್ಕೆ ತೊಂದರೆ ಕೊಡಲು ಪ್ರಯತ್ನಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ರಾಜ್ಯದಲ್ಲಿ ಪ್ರತಿಪಕ್ಷಗಳೂ ಸೇರಿದಂತೆ ಸಾಕಷ್ಟು ಛೀಮಾರಿಯನ್ನು ಎದುರಿಸುವಂತಾಗಿದೆ.

ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುವ ಬಗ್ಗೆ ಈ ಹಿಂದೆ ಎಚ್ಚರಿಕೆ ನೀಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಯನ್ನು ಉಲ್ಲೇಖಿಸಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಬಿಜೆಪಿ, "ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾದರೂ ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ರಾಜಧಾನಿಯ ರಸ್ತೆ ಗುಂಡಿ ಮುಚ್ಚಲು ಆಗಿಲ್ಲ. ಯಮರೂಪದ ಗುಂಡಿಗಳಿಗೆ ಟಾರ್‌, ಸಿಮೆಂಟ್‌ ಹಾಕುವ ಬದಲು ಡಿಕೆ ಶಿವಕುಮಾರ್ ಸ್ಪ್ಯಾನರ್‌ ಹಿಡಿದು ನಟ್‌-ಬೋಲ್ಟ್‌ ಬಿಗಿ ಮಾಡಲು ಹೊರಟಿದ್ದಾರೆ! ಜನರಿಗೆ ರಸ್ತೆ ಗುಂಡಿ ಚಿಂತೆಯಾದರೆ, ಸರ್ಕಾರಕ್ಕೆ ಪ್ರಚಾರದ ಚಿಂತೆ.", ಎಂದಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿದ ಜೆಡಿಎಸ್ ಪಕ್ಷ ಸರಣಿ ಸವಾಲನ್ನು ಎಸೆಗಿದೆ, "ನಿಯಮಗಳ ಉಲ್ಲಂಘನೆ ನೆಪದಲ್ಲಿ ಬಿಡದಿಯ ಬಿಗ್ ಬಾಸ್ ಮನೆಗೆ ಬೀಗ ಹಾಕಿಸಿದ್ದೀರಿ. ಒಪ್ಪಿಕೊಳ್ಳೋಣ. ‌ಅದೇ ರೀತಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರೇ.. ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ರೈತರ ಆತ್ಮಹತ್ಯೆಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ?

ರಾಜ್ಯದ ಜನರ ಮೇಲೆ ನಿರಂತರವಾಗಿ ತೆರಿಗೆ ಬರೆ ಎಳೆದು ಲೂಟಿ ಹೊಡೆಯುತ್ತಿರುವುದಕ್ಕೆ ಯಾವಾಗ ಬೀಗ ಹಾಕುತ್ತೀರಾ? ಬೆಲೆ ಏರಿಕೆಗಳ ಮೂಲಕ ಜನಸಾಮಾನ್ಯರನ್ನು ಪಿಕ್ ಪಾಕೆಟ್ ಮಾಡುತ್ತಿರುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಯಾವಾಗ ಬೀಗ ಹಾಕುತ್ತೀರಾ?

ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯನ್ನು ತಡೆಯಲು ಯಾವ ರೀತಿ ಬೀಗ ಹಾಕಿಸುತ್ತೀರಾ?

ರಾಜ್ಯದ ಜನರ ತೆರಿಗೆ ಹಣವನ್ನು ಅಕ್ರಮವಾಗಿ ವಾಮಮಾರ್ಗಗಳ ಮೂಲಕ ಕಾಂಗ್ರೆಸ್ ಹೈಕಮಾಂಡ್'ಗೆ ಕಪ್ಪ ಒಪ್ಪಿಸುತ್ತಿರುವುದಕ್ಕೆ ಯಾವಾಗ ಬೀಗ ಹಾಕಿಸುತ್ತೀರಾ?

ಕಾಂಗ್ರೆಸ್ ಸರ್ಕಾರದ 60% ಕಮಿಷನ್ ದಂಧೆಗೆ ಯಾವಾಗ ಬೀಗ ಹಾಕುತ್ತೀರಾ?

ಕಾಂಗ್ರೆಸ್ ಶಾಸಕರು ಮತ್ತು ಕಾಂಗ್ರೆಸ್ ಪುಢಾರಿಗಳು ನಡೆಸುತ್ತಿರುವ ಕ್ಯಾಸಿನೋ ದಂಧೆ, ಅಕ್ರಮಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ?

ಭ್ರಷ್ಟಾಚಾರದ ಕೂಪಗಳಾಗಿರುವ ಸರ್ಕಾರಿ ಇಲಾಖೆ, ಕಚೇರಿಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ?

ಕೈಲಾಗದವರು ಮೈಪರಚಿ ಕೊಂಡಂತೆ ಇದೆ ಕಾಂಗ್ರೆಸ್ ಸರ್ಕಾರದ ದುರಾಡಳಿತ."

English summary :Lock on Kannada Bigg Boss house: Opposition alleges that the state government is tightening control over Sandalwood actors

 ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ನ್ಯೂಸ್ MORE NEWS...