ಪೊಲೀಸರಿಂದ ತಪ್ಪಿಸಿಕೊಂಡು ಬಾವಿಗೆ ಬಿದ್ದಿದ್ದ ಯುವಕ ಸಾವು! | Janata news
ಬೀದರ್ : ಪೊಲೀಸ್ ವಶದಲ್ಲಿದ್ದ ಯುವಕನೊಬ್ಬನ ಶವ ಠಾಣೆಯ ಬಳಿಯ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಕಮಲನಗರ ಪಟ್ಟಣದಲ್ಲಿ ನಡೆದಿದೆ.
25 ವರ್ಷದ ಶ್ರೀಮಂತ ಮಹಾದೇವ ಗಾಯಕವಾಡ್ ಮೃತ ಯುವಕ. ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಕ್ಷುಲ್ಲಕ ಕಾರಣಕ್ಕಾಗಿ ತನ್ನ ಚಿಕ್ಕಪ್ಪ ಸಂಜೀವ ಕುಮಾರ್ ಗಾಯಕವಾಡ್ ಅವರೊಂದಿಗೆ ಜಗಳಮಾಡಿ ಅವರ ಮೇಲೆ ಬ್ಲೇಡ್ ನಿಂದ ದಾಳಿ ನಡೆಸಿ ಗಾಯಗೊಳಿಸಿದ್ದನು. ಇದರಿಂದ ಆಕ್ರೋಶಗೊಂಡ ಸಂಜೀವ ಕುಮಾರ್ ಅವರು ಶ್ರೀಮಂತ್ ವಿರುದ್ಧ ಕಮಲನಗರ ಠಾಣೆಯಲ್ಲಿ ದೂರು ದಾಖಲಿಸದ್ದರು.
ನಂತರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಶ್ರೀಮಂತ್ ನನ್ನು ಪೊಲೀಸ್ ಠಾಣೆಗೆ ಕರೆ ತಂದಿದ್ದರು. ರಾತ್ರಿ 11-45ರ ಸುಮಾರಿಗೆ ಮೂತ್ರ ವಿಸರ್ಜನೆಗೆ ಹೋಗುವುದಾಗಿ ಶೌಚಾಲಯಕ್ಕೆ ಹೋದಾಗ ಅಲ್ಲಿಂದ ಪರಾರಿಯಾಗಿದ್ದ. ಆತನ ಹುಡುಕಾಟ ನಡೆಸಿದಾಗ ಆತನ ಮೃತದೇಹ ಠಾಣೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.