Two students fell and died in Tungabhadra left bank canal while going to click selfie
ಸೆಲ್ಫಿ ಕ್ಲಿಕ್ಕಿಸಲು ಹೋಗಿ ಕಾಲುವೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ನಗರದ ವಿದ್ಯಾನಿಧಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಸುಜಿತ್, ವೈಭವ್ ಮೃತ ದುರ್ದೈವಿಗಳು.
ಪಿಯುಸಿ ವಿದ್ಯಾರ್ಥಿಗಳಾದ ಸುಜಿತ್ ಹಾಗೂ ವೈಭವ್ ಮೃತರು. ಕಲಮಲಾ ಗ್ರಾಮದ ಹೊರವಲಯದ ದೇವದುರ್ಗ ರಸ್ತೆ ಮಾರ್ಗದಲ್ಲಿ ಬರುವ ತುಂಗಭದ್ರಾ ಎರಡದಂಡೆ ನಾಲೆಗೆ ವೀಕೆಂಡ್ ಎಂಜಾಯ್ಮೆಂಟ್ಗಾಗಿ ನಾಲ್ವರು ವಿದ್ಯಾರ್ಥಿಗಳ ತಂಡ ಸ್ನಾನಕ್ಕೆ ತೆರಳಿದ್ದಾರೆ. ಈ ವೇಳೆ ನಾಲೆಯಲ್ಲಿ ಸೆಲ್ಫಿ ತೆಗೆಯುವಾಗ ಸುಜಿತ್ ಹಾಗೂ ವೈಭವ್ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.
ಅಗ್ನಿಶಾಮಕ ಸಿಬ್ಬಂದಿ ಹಾಗೂ ರಾಯಚೂರು ಗ್ರಾಮೀಣ ಪೊಲೀಸರು ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದರು. ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.