ಬಬ್ರುವಾಹನ ಸಿನಿಮಾ ಖ್ಯಾತಿಯ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ಇನ್ನಿಲ್ಲ! | Filmz news
: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ, ವಿತರಕ ಕೆ.ಸಿ.ಎನ್ ಚಂದ್ರಶೇಖರ್ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ತಡರಾತ್ರಿ ಕೆ.ಸಿ.ಎನ್ ಚಂದ್ರಶೇಖರ್ ವಿಧಿವಶರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ 9 ಗಂಟೆಯಿಂದ ಶಿವಾನಂದ ಸರ್ಕಲ್ ಬಳಿ ಇರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಎರಡು ಬಾರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ (ಕೆಎಫ್ಸಿಸಿ) ಹಾಗೂ ಒಂದು ಬಾರಿ ಸೌತ್ ಇಂಡಿಯನ್ ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ (ಎಸ್ಐಎಫ್ಸಿಸಿ) ಅಧ್ಯಕ್ಷರಾಗಿ ಕೆ.ಸಿ.ಎನ್ ಚಂದ್ರಶೇಖರ್ ಕಾರ್ಯ ನಿರ್ವಹಿಸಿದ್ದರು.
ಶಂಕರ್ ಗುರು, ಡಾ.ರಾಜ್ಕುಮಾರ್ ನಟನೆಯ ಹುಲಿ ಹಾಲಿನ ಮೇವು ಚಿತ್ರವನ್ನು ಕೆ.ಸಿ.ಎನ್ ಚಂದ್ರಶೇಖರ್ ನಿರ್ಮಾಣ ಮಾಡಿದರು.
English summary :Sandalwood