ಸಾವಿನಲ್ಲೂ ಸಾರ್ಥಕತೆ ಮೆರೆದ ಜಯಂತಿ, ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟಿ ಜಯಂತಿ! | Filmz news
: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಜಯಂತಿ ಅವರು ಸೋಮವಾರ (ಜು.26) ನಿಧನರಾಗಿದ್ದಾರೆ. ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಸಂಜೆ ಐದು ಗಂಟೆಗೆ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.
ಬನಶಂಕರಿ ಚಿತಾಗಾರದಲ್ಲಿ ಪೊಲೀಸ್ ಗೌರವದೊಂದಿಗೆ ಜಯಂತಿ ಅಂತ್ಯಕ್ರಿಯೆ ನೆರವೇರಿದೆ. ಪುತ್ರ ಕೃಷ್ಣಕುಮಾರ್ ಅಂತಿಮ ವಿಧಿವಿಧಾನ ನೆರವೇರಿಸಿದ್ದಾರೆ. ಜಯಂತಿ ಕುಟುಂಬದವರು, ಅಭಿಮಾನಿಗಳು, ಚಿತ್ರರಂಗದ ಕೆಲವರು ಈ ಸಂದರ್ಭದಲ್ಲಿ ಹಾಜರಿದ್ದರು.
ಇನ್ನೂ ಅಭಿನಯ ಶಾರದೆ ಎರಡು ಕಣ್ಣುಗಳನ್ನು ನಾರಾಯಣ ನೇತ್ರಾಲಯದ ಡಾ ರಾಜ್ ಕುಮಾರ್ ಐ ಬ್ಯಾಂಕ್ ಗೆ (Eye Bank) ನೀಡಲಾಗಿದೆ. ಅವರ ಕಣ್ಣುಗಳನ್ನು ಬಾಲಕನೊಬ್ಬನಿಗೆ ನೀಡಲಾಗಿದೆ ಎನ್ನಲಾಗಿದೆ. ಈ ಮೂಲಕ ಸಾವಿನಲ್ಲೂ ಕೂಡ ಅವರು ಮಾನವೀಯತೆಯನ್ನು ಮೆರೆದು ಇತರರಿಗೆ ಮಾದರಿಯಾಗಿದ್ದಾರೆ.
English summary :Actress Jayanthi Funeral