ತಿಮ್ಮಪ್ಪನ ಸನ್ನಿಧಾನದಲ್ಲಿ ದರ್ಶನ್; ಸಂಸದೆ ಸುಮಲತಾ, ಅಭಿಷೇಕ್ ಸಾಥ್ | Filmz news
: ಡಿ ಬಾಸ್ ದರ್ಶನ ಸದ್ಯ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇತ್ತೀಚಿಗಷ್ಟೆ ಕೇರಳದ ಶನಿದೇವರ ದೇವಸ್ಥಾನಕ್ಕೆ ತೆರಳಿದ್ದ ದರ್ಶನ್, ಇಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
ದರ್ಶನ್ ಅವರ ಜೊತೆ ಮಂಡ್ಯ ಸಂಸದೆ ಸುಮಲತಾ, ಅಭಿಷೇಕ್ ಅಂಬರೀಶ್ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು ತಿರುಮಲನ ಸನ್ನಿಧಾನಕ್ಕೆ ತೆರಳಿದ್ದಾರೆ.
ಸೋಮವಾರ ಬೆಳಗ್ಗೆ ತಿರುಪತಿಯಲ್ಲಿ ತಿಮ್ಮಪ್ಪನ ದರ್ಶನ ಪಡೆದಿರುವ ಫೋಟೋಗಳು ಜೊತೆಗೆ ಮಂಡ್ಯ ಸಂಸದೆ ಸುಮಲತಾ, ಅಭಿಷೇಕ್ ಅಂಬರೀಶ್ ಹಾಗೂ ದರ್ಶನ್ ಅವರು ತಿರುಪತಿಗೆ ಭೇಟಿ ಕೊಟ್ಟಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.. ನಟ ದರ್ಶನ್ ಮತ್ತು ಅಭಿಷೇಕ್ ಒಟ್ಟಿಗೆ ಕಾಣಿಸಿಕೊಂಡಿರುವ ಫೋಟೋ ಗಮನ ಸೆಳೆದಿದೆ. ಇನ್ನು ಆಗಸ್ಟ್ 11 ರಂದು ಡಿ ಬಾಸ್ ಕನ್ನಡ ಚಿತ್ರರಂಗದಲ್ಲಿ 24 ವರ್ಷ ಪೂರೈಸಲಿದ್ದಾರೆ.
English summary :Darshan