ಕಾಂತಾರ ಸಿನಿಮಾ ನೋಡಿ ಪತ್ರವನ್ನ ಹಂಚಿಕೊಂಡ ಕಿಚ್ಚ ಸುದೀಪ್! | Filmz news

2022-10-08
4448
Kichcha Sudeep shared the letter after watching Kantara movie!

: ಕಾಂತಾರ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ನಟ ಕಿಚ್ಚ ಸುದೀಪ್ ಕೂಡ ಕಾಂತಾರ ಚಿತ್ರವನ್ನು ವೀಕ್ಷಿಸಿದ್ದಾರೆ.

ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾ ನೋಡಿ ಅಭಿಯನ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾಂತಾರ ಎಂದು ಕ್ಯಾಪಿಟಲ್ ಲೆಟರ್​ನಲ್ಲಿ ಕ್ಯಾಪ್ಶನ್ ಕೊಟ್ಟ ಫೋಟೋ ಒಂದನ್ನು ಪೋಸ್ಟ್ ಮಾಡಿದ್ದಾರೆ.

ಕಿಚ್ಚ ಸುದೀಪ್ ಬರೆದಿರುವ ಪತ್ರದಲ್ಲಿ ಏನಿದೆ?

ಪತ್ರವನ್ನು ಬರೆಯುವಂತೆ ಮಾಡಿದ ತಂಡಕ್ಕೆ ನನ್ನ ಈ ಪತ್ರ..
ಕೆಲವು ಸಿನಿಮಾಗಳು ಚೆನ್ನಾಗಿರುತ್ತವೆ, ಕೆಲವು ಅದ್ಭುತವಾಗಿರುತ್ತವೆ. ಆದರೆ, ಕೆಲವು ಚಿತ್ರಗಳನ್ನು ನೋಡಿ ನಮ್ಮ ಬಾಯಿಂದ ಮಾತೇ ಹೊರಡದಂತೆ ಆಗುವುದು ಬಹಳ ಅಪರೂಪ. ಆದರೆ ಅಪರೂಪಕ್ಕೆ ನಮ್ಮನ್ನು ಮಂತ್ರಮುಗ್ಧಗೊಳಿಸುವ ಸಿನಿಮಾ ನೋಡುತ್ತೇವೆ. ಅಂತಹ ಒಂದು ಸಿನಿಮಾ ಆಗಿರುವ ಕಾಂತಾರ ದೊಡ್ಡ ಮಟ್ಟದ ಪರಿಣಾಮವನ್ನು ಬೀರಿದೆ. ಸಿಂಪಲ್ ಪ್ಲಾಟ್, ಅಸಾಧಾರಣ ರೀತಿಯಲ್ಲಿ ಬರೆದ, ಫೆಂಟಾಸ್ಟಿಕ್ ಆಗಿ ಮಾಡಲಾಗಿದೆ.

ಕಾಂತಾರ ಅಂಥದ್ದೊಂದು ಚಿತ್ರ. ಒಂದು ಸರಳವಾದ ಕಥೆ, ಒಳ್ಳೆಯ ಚಿತ್ರಕಥೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಅದ್ಭುತವಾದ ನಿರೂಪಣೆ ಈ ಚಿತ್ರದ ಜೀವಾಳ. ರಿಷಬ್ ಶೆಟ್ಟಿ ತಮ್ಮ ಅದ್ಭುತ ಅಭಿನಯದಿಂದ ನಮ್ಮ ಮನಸ್ಸನ್ನು ಗೆದ್ದಿದ್ದಾರೆ.

ಯಾರಾದರೂ ಈ ರೀತಿಯಾಗಿ ಹೇಗೆ ಯೋಚಿಸಲು ಸಾಧ್ಯ ಎಂದು ಅಚ್ಚರಿ ಪಡುವುದಷ್ಟೇ ನಿಮ್ಮ ಕೆಲಸ. ಪರದೆ ಮೇಲೆ ತೋರಿಸಿದ ರೀತಿಯ ಅರ್ಧದಷ್ಟಾದರೂ ಈ ಪ್ಲಾಟ್ ಪೇಪರ್ ಮೇಲಿದ್ದರೂ ಅದು ಅಚ್ಚರಿ. ಕ್ಲೈಮ್ಯಾಕ್ಸ್ ಪೇಪರ್​​ನಲ್ಲಿ ಕೂಡಾ ಪೇಪರ್ ನಲ್ಲಿ ಅದೊಂದು ಸಾಮಾನ್ಯ ಎಂಡಿಂಗ್ ಆಗಿರುತ್ತಿತ್ತು. ಇದು ನಿರ್ದೇಶಕರ ದೃಷ್ಟಿ. ನಿರ್ದೇಶಕ ಕಲ್ಪಿಸಿಕೊಂಡಂತೆ ಸಿನಿಮಾ ಸಿದ್ಧವಾಗಿದೆ. ಇದು ನಿಜಕ್ಕೂ ಮೆಚ್ಚುಗೆಗೆ ಅರ್ಹವಾಗಿದೆ.

ಇಂಥದ್ದೊಂದು ಅಸಾಧಾರಣ ಚಿತ್ರವನ್ನು ಕಟ್ಟಿಕೊಟ್ಟಿದ್ದಕ್ಕೆ ರಿಷಬ್ ಶೆಟ್ಟಿಗೆ ನನ್ನ ಮೊದಲ ಮೆಚ್ಚುಗೆ. ಅವರ ಮೇಲೆ ನಂಬಿಕೆ ಇಟ್ಟು, ಇಂಥದ್ದೊಂದು ಚಿತ್ರವನ್ನು ರೂಪಿಸಿರುವುದಕ್ಕೆ ಕಾರಣರಾದ ಚಿತ್ರತಂಡದವರೆಲ್ಲರಿಗೂ ನನ್ನ ಅಭಿನಂದನೆ.

ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ನಿಜಕ್ಕೂ ಒಬ್ಬ ಅಪ್ರತಿಮ ಸಂಗೀತ ನಿರ್ದೇಶಕ ಎಂದು ಮತ್ತೊಮ್ಮೆ ಪ್ರೂವ್ ಮಾಡಿದ್ದಾರೆ. ಈ ಚಿತ್ರದ ಮೇಲೆ ನಂಬಿಕೆ ಇಟ್ಟು, ಇದನ್ನು ನಿರ್ಮಿಸಿದ ಹೊಂಬಾಳೆ ಫಿಲಂಸ್ ಸಂಸ್ಥೆಗೂ ನನ್ನ ಶುಭಾಶಯಗಳು.

ಕಾಂತಾರ ಚಿತ್ರ ನೋಡಿದವರು ನೀಡಿದ ಪ್ರತಿಕ್ರಿಯೆಗಳಿಗೆ ತಕ್ಕ ಹಾಗೆ ಚಿತ್ರ ನಿಜಕ್ಕೂ ಅದ್ಭುತವಾಗಿ ಮೂಡಿಬಂದಿದೆಯಾ ಎಂಬ ಕುತೂಹಲದಿಂದ ಚಿತ್ರ ನೋಡಿದೆ. ಚಿತ್ರ ಚೆನ್ನಾಗಿ ಮೂಡಿಬಂದಿರುವುದಷ್ಟೇ ಅಲ್ಲ, ನಮ್ಮ ನಿರೀಕ್ಷೆಗಳನ್ನೂ ಮೀರಿ ಅದ್ಭುತವಾಗಿದೆ ಎಂದು, ಕಿಚ್ಚ ಸುದೀಪ್ ಬರೆದಿದ್ದಾರೆ.

English summary :Kichcha Sudeep shared the letter after watching Kantara movie!

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
 ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ
 ಗಣರಾಜ್ಯೋತ್ಸವದಲ್ಲಿ ಯುರೋಪಿಯನ್ ಧ್ವಜಗಳು ಭಾರತ-ಇಯು ರಕ್ಷಣಾ ಸಂಬಂಧಗಳನ್ನು ಬಲಪಡಿಸುವ ಸಂಕೇತ - ಯುರೋಪಿಯನ್ ಆಯೋಗದ ಅಧ್ಯಕ್ಷರು
ಗಣರಾಜ್ಯೋತ್ಸವದಲ್ಲಿ ಯುರೋಪಿಯನ್ ಧ್ವಜಗಳು ಭಾರತ-ಇಯು ರಕ್ಷಣಾ ಸಂಬಂಧಗಳನ್ನು ಬಲಪಡಿಸುವ ಸಂಕೇತ - ಯುರೋಪಿಯನ್ ಆಯೋಗದ ಅಧ್ಯಕ್ಷರು
ಮತ್ತೊಮ್ಮೆ ಯು ಟರ್ನ್ : ಯುಕೆ ಪ್ರತಿಕ್ರಿಯೆಯ ನಂತರ ನ್ಯಾಟೋ ಮಿತ್ರರಾಷ್ಟ್ರಗಳ ಕುರಿತಾದ ಹೇಳಿಕೆಗಳನ್ನು ಹಿಂಪಡೆದ ಟ್ರಂಪ್
ಮತ್ತೊಮ್ಮೆ ಯು ಟರ್ನ್ : ಯುಕೆ ಪ್ರತಿಕ್ರಿಯೆಯ ನಂತರ ನ್ಯಾಟೋ ಮಿತ್ರರಾಷ್ಟ್ರಗಳ ಕುರಿತಾದ ಹೇಳಿಕೆಗಳನ್ನು ಹಿಂಪಡೆದ ಟ್ರಂಪ್
ಭಾರತದಲ್ಲಿ ಇಯು ಅಧ್ಯಕ್ಷರು : €200 ಬಿಲಿಯನ್‌ ದ್ವಿಪಕ್ಷೀಯ ವ್ಯಾಪಾರದ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಕ್ಷಣಗಣನೆ
ಭಾರತದಲ್ಲಿ ಇಯು ಅಧ್ಯಕ್ಷರು : €200 ಬಿಲಿಯನ್‌ ದ್ವಿಪಕ್ಷೀಯ ವ್ಯಾಪಾರದ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಕ್ಷಣಗಣನೆ

ಫೋಟೋ ಗ್ಯಾಲಾರಿ MORE PHOTO...