ಬೈಕ್ ಕಳ್ಳತನ, ರಾಬರಿ ಮಾಡುತ್ತಿದ್ದ ಆರೋಪಿ ಅಂದರ್! | Janata news
ಬೆಂಗಳೂರು : ಬೈಕ್ ಕಳ್ಳತನ ಮತ್ತು ರಾಬರಿ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನ ಸೊಲದೇವನಹಳ್ಳಿಯಲ್ಲಿ ನಡೆದಿದೆ.
ಗಣೇಶ್ ಅಲಿಯಾಸ್ ಗಣಿ ಬಂಧಿತ ಆರೋಪಿ. ಈತನಿಂದ 3.85 ಲಕ್ಷ ಮೌಲ್ಯದ ಚಿನ್ನ, ಹಾಗೂ ಮೂರು ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತನಿಂದ 3.5 ಲಕ್ಷ ಮೌಲ್ಯದ 3 ದ್ವಿಚಕ್ರ ವಾಹನ, 57 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಮೇಲೆ 8 ಹೆಚ್ಚು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈತನನ್ನ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
English summary :Bangalore