ಕಾಲುವೆ ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಮಕ್ಕಳು ದಾರುಣ ಸಾವು! | Janata news
ಕೋಲಾರ: : ನೀರಲ್ಲಿ ಆಡಲು ಹೋದ ಮೂವರು ಮಕ್ಕಳು ನೀರು ಪಾಲಾದ ಘಟನೆ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಕುಂಬಾರಪಾಳ್ಯ ರೈಲ್ವೇ ಅಂಡರ್ ಪಾಸ್ ಬಳಿ ನಡೆದಿದೆ.
ಘಟನೆಯಲ್ಲಿ ಒಂದು ಹೆಣ್ಣು ಮಗು ಹಾಗೂ ಎರಡು ಗಂಡು ಮಕ್ಕಳು ಇದ್ದಾರೆ. ಬಾಲಕಿ ಮೋಹಿಕ್(8), ಸಾದಿಕ್(12), ಫಯಾಜ್ (07) ಮೃತ ಮಕ್ಕಳು ಎಂದು ಗುರುತಿಸಲಾಗಿದೆ.
ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ರೈಲ್ವೆ ಅಂಡರ್ ಪಾಸ್ ಹತ್ತಿರ ಹೆಚ್ಚಿನ ನೀರು ನಿಂತಿದೆ. ಈ ಸ್ಥಳಕ್ಕೆ ಮಕ್ಕಳು ಆಟವಾಡಲು ತೆರಳಿದ್ದಾರೆ. ನೀರಿನ ಪ್ರಮಾಣದ ಕುರಿತು ಅರಿವಿರದ ಮಕ್ಕಳು ಆಟವಾಡಲು ತೆರಳಿದ್ದಾರೆ. ಈ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ದೇಹಗಳನ್ನು ಹೊರತೆಗೆಯಲಾಗಿದ್ದು, ಘಟನಾ ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.