ಮಾಜಿ ಸಚಿವೆ ಉಮಾಶ್ರೀ ಮನೆಗೆ ಕನ್ನ: ಭಾರೀ ಪ್ರಮಾಣದ ಚಿನ್ನಾಭರಣ ಕಳ್ಳತನ! | Janata news
ಬಾಗಲಕೋಟೆ: : ಮಾಜಿ ಸಚಿವೆ ಉಮಾಶ್ರೀ ಮನೆಯಲ್ಲಿ ಕಳ್ಳತನ ನಡೆದಿದೆ. ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಉಮಾಶ್ರೀ ಮನೆಯ ಬಾಗಿಲು ಮುರಿದು ಕಳ್ಳತನ ಮಾಡಿದ್ದು, ಅಪಾರ ಪ್ರಮಾಣದ ವಸ್ತು ಮತ್ತು ಹಣ ಕದ್ದಿರುವ ಶಂಕೆ ಇದೆ.
ಸ್ಥಳಕ್ಕೆ ಬನಹಟ್ಟಿ ಸಿಪಿಐ ಕರುಣೇಶಗೌಡ ಆಗಮಿಸಿದ್ದು ತೇರದಾಳ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಆರೋಪಿಗಾಗಿ ಬಲೆ ಬೀಸಲಾಗಿದ್ದು ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಮಾಶ್ರೀ ಅವರು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದು, ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಳ್ಳರು ಈ ಕೃತ್ಯ ಎಸಗಿದ್ದಾರೆ. ಸಿಲಿಕಾನ್ ಸಿಟಿಯಿಂದ ಉಮಾಶ್ರೀ ಅವರು ಮರಳಿ ಬಂದು ಪರಿಶೀಲನೆ ನಡೆಸಿದ ನಂತರ, ಎಷ್ಟು ಹಣ,ಚಿನ್ನಾಭರಣ ಕಳ್ಳತನವಾಗಿದೆ ಎಂಬುದು ಸ್ಪಷ್ಟವಾಗಲಿದೆ.
English summary :umashree