ಅತ್ತೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ ಮಾಡಿದ ಅಳಿಯ, ಯಾಕೆ? | Janata news
ಕಲಬುರಗಿ : ಅಳಿಯನೇ ತನ್ನ ಅತ್ತೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಭಿಮನಾಳ ಗ್ರಾಮದಲ್ಲಿ ನಡೆದಿದೆ.
45 ವರ್ಷದ ಲಕ್ಷ್ಮಿಬಾಯಿ ಕೊಲೆಯಾದ ಮಹಿಳೆ. ಆರೋಪಿ ರಾಮು(55) ಅತ್ತೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಮಗಳು, ಅಳಿಯನ ಮಧ್ಯೆ ಜಗಳವಾಗಿತ್ತು. ಹೀಗಾಗಿ ಪತ್ನಿ ತವರು ಮನೆ ಸೇರಿದ್ದಳು. ಇದೀಗ ಅಳಿಯನ ಬಳಿ ಮಾತನಾಡಿ, ಜಗಳ ಬಗೆ ಹರಿಸಿ ಬರುತ್ತೇನೆ ಎಂದು ಅತ್ತೆ ಲಕ್ಷ್ಮಿಬಾಯಿ ಭಾಲ್ಕಿ ತಾಲ್ಲೂಕಿನಿಂದ ಭಿಮನಾಳ ಗ್ರಾಮಕ್ಕೆ ಬಂದಿದ್ದಳು.
ಮಗಳ ವಿಚಾರಕ್ಕೆ ಅತ್ತೆ ಮತ್ತು ಅಳಿಯನ ಮಧ್ಯೆ ಗಲಾಟೆಯಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ರಾಮು ತನ್ನ ಅತ್ತೆ ಲಕ್ಷ್ಮಿಬಾಯಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.
ಕೊಲೆ ಮಾಡುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.