ಕಾಡಾನೆ ತುಳಿತಕ್ಕೆ ಸಿಕ್ಕಿ ವ್ಯಕ್ತಿ ಸಾವು! | Janata news
ಚಾಮರಾಜನಗರ : ಬಿಳಿಗಿರಿ ರಂಗನಾಥ ಮೀಸಲು ಅರಣ್ಯದ ವ್ಯಾಪ್ತಿಗೆ ರಿಸರ್ವ್ ಫಾರೆಸ್ಟ್ನ ಹಂಗಲವಾಡಿ ಗ್ರಾಮದಲ್ಲಿ 61 ವರ್ಷದ ವ್ಯಕ್ತಿಯೊಬ್ಬರು ಕಾಡಾನೆ ತುಳಿತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.
ಚಾಮರಾಜನಗರ ತಾಲೂಕಿನ ಹೊಂಗಲವಾಡಿ ಗ್ರಾಮದ ಗುರುಸ್ವಾಮಿ ಎಂದು ಗುರುತಿಸಲಾಗಿದೆ. . ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಅರಣ್ಯದೊಳಕ್ಕೆ ಜಾನುವಾರುಗಳನ್ನು ಮೇಯಿಸಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಗುರುಸ್ವಾಮಿ ಬುಧವಾರ ರಾತ್ರಿ ಮನೆಗೆ ಬಾರದೇ ಇದ್ದಾಗ ಬೆಳಗ್ಗೆ ಹುಡುಕಾಟ ನಡೆಸಿದ್ದಾರೆ. ಕಾಡಂಚಿನ ಅರಣ್ಯದೊಳಗೆ ಗುರುಸ್ವಾಮಿ ಮೃತದೇಹ ಪತ್ತೆಯಾಗಿದೆ.
RELATED TOPICS:
English summary :ಚಾಮರಾಜನಗರ