ಬೈಕ್ ಮೇಲೆ ಬ್ಯಾಗ್ನಲ್ಲಿಟ್ಟಿದ್ದ 7 ಲಕ್ಷ ನಗದನ್ನು ಹಾಡಹಗಲೇ ಎಗರಿಸಿದ ಖದೀಮ! | Janata news
ಚಿತ್ರದುರ್ಗ : ಬೈಕ್ ಮೇಲೆ ಬ್ಯಾಗ್ನಲ್ಲಿಟ್ಟಿದ್ದ 7 ಲಕ್ಷ ರೂಪಾಯಿ ಕಳ್ಳತನ ಮಾಡಿ ಖದೀಮ ಎಸ್ಕೇಪ್ ಆಗಿರುವ ಘಟನೆ ಚಿತ್ರದುರ್ಗದ ಕೋಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಹೊಳಲ್ಕೆರೆ ರಸ್ತೆಯ ಮೋರ್ ಮಾಲ್ ಬಳಿ ನಡೆದಿದ್ದು, ಅಡಿಕೆ ಮಂಡಿ ಮ್ಯಾನೇಜರ್ ಭೀಮಸಮುದ್ರ ಮೂಲದ ಓಂಕಾರಪ್ಪ ಎಂಬುವವರಿಗೆ ಸೇರಿದ ಹಣವಾಗಿದ್ದು, ಎಸ್ಬಿಐ ಬ್ಯಾಂಕಿನಲ್ಲಿ ಹೊಸ ನೋಟು ಎಕ್ಸ್ ಚೇಂಜ್ ಮಾಡಿಕೊಂಡು ಹೋಗುವಾಗ ಕಳ್ಳತನ ನಡೆದಿದೆ.
ಅಡಿಕೆ ಮಂಡಿಯಲ್ಲಿ ವ್ಯವಸ್ಥಾಪಕನಾಗಿದ್ದ ಓಂಕಾರಪ್ಪ ದೀಪಾವಳಿ ಹಿನ್ನೆಲೆಯಲ್ಲಿ ಲಕ್ಷೀ ಪೂಜೆ ಸಮಯದಲ್ಲಿ ಹಣ ಇಟ್ಟು ಪೂಜೆ ಮಾಡಲೆಂದು 7 ಲಕ್ಷ ರೂಪಾಯಿ ಹಣವನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು.
ಬೈಕ್ ಹಿಂಬದಿ ಬ್ಯಾಗ್ನಲ್ಲಿ ಹಣವನ್ನಿಟ್ಟು ಮನೆಗೆ ಹೋಗುವಾಗ ಮೋರ್ ಮಾಲ್ ಬಳಿ ಬೈಕ್ ನಿಲ್ಲಿಸಿ ಕಿರಾಣಿ ಅಂಗಡಿಗೆ ಚಾಕಲೇಟ್ ತರಲು ಹೋಗಿದ್ದಾರೆ. ಈ ವೇಳೆ ಹೊಂಚು ಹಾಕಿದ್ದ ಖತರ್ನಾಕ್ ಕಳ್ಳ ಹಣ ದೋಚಿ ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.