ಬಲವಂತದ ಬಳ್ಳಾರಿ ಬಂದ್ ಮಾಡಿದರೆ ಕ್ರಮ: ಸಚಿವ ಆನಂದ ಸಿಂಗ್ | Janata news
ಬಳ್ಳಾರಿ : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಂದ್ ಮಾಡುವುದಕ್ಕೆ ಮತ್ತು ಹೋರಾಟ ಮಾಡುವುದಕ್ಕೆ ಸ್ವಾತಂತ್ರ್ಯ ಇದೆ. ಬಲವಂತದ ಬಂದ್ ಮಾಡಿದರೇ ಕಾನೂನಿನ ಕ್ರಮಕೈಗೊಳ್ಳಲಾಗುವುದು ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ತಿಳಿಸಿದರು.
ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ವಿವಿಧ ಸಂಘಟನೆಗಳು ನ.26ರಂದು ಬಳ್ಳಾರಿ ಬಂದ್ ಕರೆ ನೀಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಆನಂದ್ ಸಿಂಗ್, ಬಲವಂತದ ಮತ್ತು ಜನರಿಗೆ ತೊಂದರೆಯಾಗುವಂಥ ಹೋರಾಟ ಅಥವಾ ಬಂದ್ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು. ಸಾಂಕೇತಿಕ ಹೋರಾಟವನ್ನು ಮಾಡಲಿ ಎಂದು ಹೇಳಿದರು.
ಸಾರ್ವಜನಿಕರಿಗೆ ಆಡಳಿತಾತ್ಮಕವಾಗಿ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ದೊಡ್ಡ ದೊಡ್ಡ ಜಿಲ್ಲೆಗಳನ್ನು ವಿಭಜಿಸಲಾಗುತ್ತದೆ.
ಸಾರ್ವಜನಿಕರಿಗೆ ಆಡಳಿತಾತ್ಮಕವಾಗಿ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ದೊಡ್ಡ ದೊಡ್ಡ ಜಿಲ್ಲೆಗಳನ್ನು ವಿಭಜಿಸಿ ರಾಮನಗರ, ಯಾದಗಿರಿಗಳು ಜಿಲ್ಲೆ ಮಾಡಿದಂತೆ ವಿಜಯನಗರ ಜಿಲ್ಲೆ ಮಾಡುವುದಕ್ಕೆ ಸರಕಾರ ತೀರ್ಮಾನಿಸಿದೆ ಎಂದರು.
ವಿಜಯನಗರ ಜಿಲ್ಲೆಯ ಕೂಗು ಇಂದು ನಿನ್ನೆಯದಲ್ಲ. ಬಹಳ ದಿನಗಳಿಂದಲೂ ಇತ್ತು. ಬಳ್ಳಾರಿ ಜಿಲ್ಲೆಯ ಪಶ್ಚಿಮ ತಾಲೂಕುಗಳ ಬಹುದಿನಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ ಎಂದರು.