ಪರಸ್ಪರ ಹಗ್ಗ ಕಟ್ಟಿಕೊಂಡು ಪ್ರೇಮಿಗಳಿಬ್ಬರು ನೀರಿಗೆ ಹಾರಿ ಆತ್ಮಹತ್ಯೆ! | Janata news
ಹಾಸನ : ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ ಬಳಿ ಬೈಕ್ ನಿಲ್ಲಿಸಿ ಪ್ರೇಮಿಗಳು ನಾಪತ್ತೆಯಾಗಿದ್ದರು. ಇದೀಗ ಇಬ್ಬರ ಮೃತದೇಹ ಪತ್ತೆಯಾಗಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಪರಸ್ಪರ ಅಪ್ಪಿಕೊಂಡ ಸ್ಥಿತಿಯಲ್ಲಿ ಪ್ರೇಮಿಗಳಿಬ್ದರ ಮೃತದೇಹ ಪತ್ತೆಯಾಗಿದೆ. ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ ಬಳಿ ನವೆಂಬರ್ 16 ರಂದು ಬೈಕ್ ನಿಲ್ಲಿಸಿ, ಚಪ್ಪಲು ಅಲ್ಲೇ ಬಿಟ್ಟು ಪ್ರೇಮಿಗಳು ನಾಪತ್ತೆಯಾಗಿದ್ದರು.
ಮೃತರನ್ನು ಹಿರಿಸಾವೆ ಗ್ರಾಮದ ಸುಶ್ಮಿತ(18), ಹಾಗೂ ಮತಿಘಟ್ಟ ಗ್ರಾಮದ ರಮೇಶ್(19) ಎಂದು ಗುರುತಿಸಲಾಗಿದೆ.
ಐಟಿಐ ಓದುತ್ತಿದ್ದ ರಮೇಶ್ ಹಾಗೂ ಪದವಿ ಓದುತ್ತಿದ್ದ ಸುಸ್ಮಿತಾ ನಡುವೆ ಕಳೆದ ಒಂದು ವರ್ಷದಿಂದ ಪ್ರೀತಿ ಇತ್ತು ಎಂದು ತಿಳಿದುಬಂದಿದೆ. ಆದರೆ ಅಂತರ್ಜಾತಿ ವಿವಾಹವನ್ನು ಮನೆಯವರು ವಿರೋಧಿಸಿದ ಹಿನ್ನೆಲೆ ಹೆದರಿ ಆತ್ಮಹತ್ಯೆ ಮಾಡಿರಬಹುದು ಎನ್ನಲಾಗಿದೆ. ನೋಣವಿನಕರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.