ಪ್ರೀತಿಸಿ ಮದುವೆಯಾಗಲು ಸಿದ್ಧವಾಗಿದ್ದ ಜೋಡಿ, ಮಗಳ ಮೇಲೆ ಅಪ್ಪ-ಅಣ್ಣನಿಂದ ತೀವ್ರ ಹಲ್ಲೆ: ಯುವತಿಯ ಕೈ ಬೆರಳು ಕಟ್! | Janata news
ಚಾಮರಾಜನಗರ : ಎರಡು ವರ್ಷಗಳಿಂದ ಪ್ರೀತಿಸಿದ ಪ್ರಿಯಕರನೊಂದಿಗೆ ಮದುವೆಯಾಗಲು ಯವತಿಯ ಪೋಷಕರು ಭಾರಿ ವಿರೋಧ ವ್ಯಕ್ತಪಡಿಸಿದ್ದು, ಮನೆಯವರಿಂದಲೇ ಯುವತಿಯ ಮೇಲೆ ತೀವ್ರ ಹಲ್ಲೆ ನಡೆದಿರುವ ಘಟನೆ ಹನೂರು ತಾಲೂಕಿನ ಪಿ.ಜಿ. ಪಾಳ್ಯದಲ್ಲಿ ನಡೆದಿದೆ.
ಸತ್ಯ ಹಾಗೂ ಧನಲಕ್ಷ್ಮಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಈ ವಿಚಾರ ಯುವತಿ ಪೋಷಕರಿಗೆ ತಿಳಿದು ಅವರು ವಿರೋಧಿಸಿದ್ದರು. ಮನೆಯವರ ತೀವ್ರ ವಿರೋಧದ ನಡುವೆಯೂ ಪ್ರೇಮಿಗಳು ಮದುವೆಗೆ ಮುಂದಾಗಿದ್ದರು. ಇದರಿಂದ ಸಿಟ್ಟಿಗೆದ್ದ ಮನೆಯವರು ಆಕೆಯ ತಂದೆ ಹಾಗೂ ಅಣ್ಣನೇ ಗಂಭೀರ ಹಲ್ಲೆ ಮಾಡಿದ್ದಾರೆ.
ಧನಲಕ್ಷ್ಮೀ ಮೇಲೆ ಹಲ್ಲೆ ಮಾಡಲು ಆಕೆಯ ತಂದೆ ಶಿವಸ್ವಾಮಿ ಹಾಗೂ ಅಣ್ಣ ಮಹೇಂದ್ರಬಂದಿದ್ದ್ದರು, ಆಗ ಕುತ್ತಿಗೆ ಕುಯ್ಯಲು ಯತ್ನಿಸಿದಾಗ ಕೈ ಅಡ್ಡ ತಂದ ಪರಿಣಾಮ ಕೈ ಬೆರಳು ಕತ್ತರಿಸಿ ಹೋಗಿದ್ದು, ಸದ್ಯಕ್ಕೆ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಯುವತಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಹಲ್ಲೆಯ ಪರಿಣಾಮ ಯುವತಿ ಕೈಯ 4 ಬೆರಳುಗಳೇ ಕಟ್ ಆಗಿವೆ. ಸದ್ಯ ಯುವತಿ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಯುವತಿಯ ಮೇಲೆ ಹಲ್ಲೆ ನಡೆಸಿದ ತಂದೆ ಮತ್ತು ಅಣ್ಣನ ವಿರುದ್ಧ ಹನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.