ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಕೊಲೆ! | Janata news
ಹಾಸನ : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಮರವಳ್ಳಿ ಗ್ರಾಮದಲ್ಲಿ ನಡೆದಿದೆ.
ಲಿಂಗರಾಜು(43) ಕೊಲೆಯಾದ ವ್ಯಕ್ತಿ. ಮೃತ ಲಿಂಗರಾಜು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರು. ಕೊರೊನಾ ಲಾಕ್ಡೌನ್ ನಂತರ ತಮ್ಮ ಸ್ವಗ್ರಾಮ ಕಮರವಳ್ಳಿಗೆ ಬಂದು ತೋಟದ ಮನೆಯಲ್ಲಿ ವಾಸವಾಗಿದ್ದರು.
ನಿನ್ನೆ ರಾತ್ರಿ ಕಾರ್ ಮತ್ತು ಬೈಕ್ನಲ್ಲಿ ಬಂದ ಸುಮಾರು ಎಂಟು ಜನ ದುಷ್ಕರ್ಮಿಗಳು ಹ್ಯಾಮರ್ ಮತ್ತು ಮಚ್ಚಿನಿಂದ ಕೈಕಾಲು, ತಲೆ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಹತ್ಯೆಗೀಡಾದ ಲಿಂಗರಾಜ್ ತನ್ನ ಸಹೋದರನ ಜೊತೆಗೆ ವಾಸವಾಗಿದ್ದು, ಹತ್ಯೆ ವೇಳೆ ಅಡ್ಡ ಬಂದ ಸಹೋದರನಿಗೂ ಹಂತಕರಿಂದ ಹಲ್ಲೆ ನಡೆದಿದೆ.
ಘಟನೆ ಸಂಬಂಧ ಹಿರೀಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.