ಇಟ್ಟಿಗೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ; ಇಬ್ಬರು ಕಾರ್ಮಿಕರು ಸಾವು! | Janata news
ಚಿತ್ರದುರ್ಗ : ಟ್ರ್ಯಾಕ್ಟರ್ ಪಲ್ಟಿ ಹೊಡೆದು ಇಬ್ಬರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಚಳ್ಳಕೆರೆ ತಾಲೂಕಿನ ರೇಖಲಗೆರೆ ಲಂಬಾಣಿಹಟ್ಟಿ ಬಳಿ ಭಾನುವಾರ ನಡೆದಿದೆ.
ಮೃತ ಕಾರ್ಮಿಕರನ್ನು ಮೊಳಕಾಲ್ಮೂರು ಮೂಲದ ಬಸಣ್ಣ(23), ಶಶಿಕುಮಾರ್ (25) ಎಂದು ಗುರುತಿಸಲಾಗಿದೆ. ಯರೇನಹಳ್ಳಿಯಿಂದ ಚಿತ್ರದುರ್ಗಕ್ಕೆ ಇಟ್ಟಿಗೆ ಸಾಗಿಸುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ದುರ್ಘಟನೆ ಸಂಭವಿಸಿದೆ.
ಮತ್ತೋರ್ವ ಕಾರ್ಮಿಕ ಗಾಯಗೊಂಡಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಾಯಕನಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :chitradurga