Tue,Apr23,2024
ಕನ್ನಡ / English

ರಾಜ್ಯದಲ್ಲಿ ಪೈಪೋಟಿ ನಡೆಯೋದು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ, ಜೆಡಿಎಸ್ ಆಟಕ್ಕುಂಟು, ಲೆಕ್ಕಕ್ಕಿಲ್ಲ ; ಸಿದ್ಧರಾಮಯ್ಯ | Janata news

13 Dec 2020
1176

ಬಾಗಲಕೋಟೆ : ಈಗ ಚುನಾವಣೆ ಇರೋದು ಕಾಂಗ್ರೆಸ್ BJP ಮಧ್ಯದಲ್ಲಿ. JDS ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗ್​ ಕೊಟ್ಟಿದ್ದಾರೆ. ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ವೇಳೆ ಸಿದ್ದರಾಮಯ್ಯ ಮಾತನಾಡಿದರು.

ಜೆಡಿಎಸ್ ಲೆಕ್ಕಕ್ಕೇ ಉಂಟು ಆಟಕ್ಕಿಲ್ಲ. ಅದು ಅಪ್ಪ ಮಕ್ಕಳ ಪಕ್ಷ, ಅದು ಪ್ರಜಾಪ್ರಭುತ್ವ ನೀತಿಯಂತೆ ರಚನೆಯಾದ ಪಾರ್ಟಿ ಅಲ್ಲ. ದೇವೇಗೌಡರು, ಕುಮಾರಸ್ವಾಮಿ ಏನು ಹೇಳ್ತಾರೆ ಅದೇ ವೇದವಾಕ್ಯ. ಅದರ ವಿರುದ್ಧ ಪ್ರಶ್ನೆ ಮಾಡುವವರು ಯಾರು ಇಲ್ಲ. ಪ್ರಶ್ನೆ ಮಾಡಿದವರಿಗೆ ಉಳಿಗಾಲವಿಲ್ಲ. ನನ್ನನ್ನೇ ಪಕ್ಷದಿಂದ ಹೊರಗೆ ಹಾಕಿ ಬಿಟ್ಟರು ಇನ್ನು ಬೇರೆಯವರನ್ನು ಬಿಡುತ್ತಾರಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ನಾನು ಅಹಿಂದ ಅಂತಾ ಮಾತಾಡಿದ್ದಕ್ಕೆ ಹೊರಹಾಕಿದರು. ದೇವೇಗೌಡರು ಅಹಿಂದ ಬೇಡ ಎಂದರು. ನಾನು ಯಾರೇ ಬಂದರೂ ನಿಲ್ಲಿಸೋದಿಲ್ಲ ಎಂದು ಉತ್ತರಿಸಿದೆ. ದೇವರೆ ಬಂದು ಹೇಳಿದರೂ ನಿಲ್ಲಿಸೋದಿಲ್ಲ ಅಂದೆ. ಅದಕ್ಕೇ ನನ್ನನ್ನು ಉಚ್ಚಾಟನೆ ಮಾಡಿಬಿಟ್ಟರು. ಆಮೇಲೆ‌ ಕಾಂಗ್ರೆಸ್​ಗೆ ಬಂದೆ. ಅಲ್ಲಿ ಎಲ್ಲರೂ ಸ್ವಾಗತ ಮಾಡಿದರು. ಜೊತೆಗೆ, ನನ್ನನ್ನು ಮುಖ್ಯಮಂತ್ರಿಯಾಗಿ ನೀವೆಲ್ಲರೂ ಮಾಡಿದ್ದೀರಿ ಎಂದು ಹೇಳಿದರು.

ನಿಮ್ಮ ಕ್ಷೇತ್ರಕ್ಕೆ ಬಂದಾಗ ನಾನು ಮೈಸೂರಿನವನು. ಆಸರೆ ಕೊಟ್ಟು ಗೆಲ್ಲಿಸಿದ್ದೀರಿ ನಾನು ನಿಮ್ಮ ಋಣ ತೀರಿಸಬೇಕು ಎಂದರು. ಉತ್ತರ ಕರ್ನಾಟಕದವನು ಗ್ರಾಮ ಪಂಚಾಯತ್​ ಗೆದ್ರೆ ತಾಲೂಕು ಪಂಚಾಯತ್​, ಜಿಲ್ಲಾ ಪಂಚಾಯತ್​​ ಗೆಲ್ಲಬಹುದು. ಪ್ರಜಾಪ್ರಭುತ್ವಕ್ಕೆ ಗ್ರಾಮ ಪಂಚಾಯತ್​​ ತಳಹದಿ, ಸ್ವಾತಂತ್ರ್ಯ ಬಂದ ಬಳಿಕ ಎರಡು ಸಾರಿ ಬಿಟ್ರೆ ಉಳಿದು ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ. ಜನರ ಆಶೀರ್ವಾದ ಮಾಡಿದ್ರೆ ಮಾತ್ರ ನಾವು ಕುರ್ಚಿ ಮೇಲೆ ಕುಳಿತುಕೊಳ್ಳಲು ಸಾಧ್ಯ ಎಂದು ತಿಳಿಸಿದರು.

ದೇಶಕ್ಕಾಗಿ ಬಿಜೆಪಿಯವರ ಕೊಡುಗೆ ಶೂನ್ಯ. ಮಾತೆತ್ತಿದರೆ ನಾವು ಹಿಂದೂಗಳು ಅಂತಾರೆ. ನಾನು ಹಿಂದೂ, ಮಹಾತ್ಮಾ ಗಾಂಧಿಯವರ ತತ್ವದ ಹಿಂದೂ. ಬಿಜೆಪಿಯವರು ಸಾವರ್ಕರ್ ಪಾಲಿಸಿ ಹಿಂದೂಗಳು ಎಂದು ಹೇಳಿದರು. ನನ್ನ ಹೆಸರೇ ಸಿದ್ದರಾಮಯ್ಯ. ಸಿದ್ದರಾಮೇಶ್ವರ ನಮ್ಮ ಮನೆ ದೇವರು. ಸಿದ್ದರಾಮೇಶ್ವರ ಹಿಂದೂ ದೇವರಾ? ಮುಸ್ಲಿಂ ದೇವರಾ? ಎಂದು ಪ್ರಶ್ನಿಸಿದರು.

RELATED TOPICS:
English summary :Siddaramaiah

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...