ಭೀಕರ ಟ್ರ್ಯಾಕ್ಟರ್ ಅಪಘಾತ: ಟ್ರ್ಯಾಕ್ಟರ್ ಪಲ್ಟಿಯಾಗಿ 6 ಮಂದಿ ದುರ್ಮರಣ; 8 ಜನರು ಗಂಭೀರ | Janata news
ರಾಮನಗರ : ಟ್ರಾಕ್ಟರ್ ನ ಟ್ರಾಲಿ ಪಲ್ಟಿಯಾಗಿ ಕನಕಪುರ ತಾಲೂಕಿನ 6 ಮಂದಿ ಮೃತಪಟ್ಟು 8 ಮಂದಿ ಗಾಯಗೊಂಡ ಘಟನೆ ಕನಕಪುರ-ತಮಿಳುನಾಡು ಗಡಿಭಾಗದಲ್ಲಿ ಸೋಮವಾರ ಸಂಭವಿಸಿದೆ.
ಕನಕಪುರ ತಾಲೂಕಿನ ಕೆರಳಾಳುಸಂದ್ರದ 6 ಗ್ರಾಮಸ್ಥರು ಸಾವನ್ನಪ್ಪಿದ್ದು, ಗಂಭೀರ ಸ್ಥಿತಿಯಲ್ಲಿರುವ 8 ಜನ ತಮಿಳುನಾಡಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕೆರಳಾಳುಸಂದ್ರ ಗ್ರಾಮದ 15 ಮಂದಿ ಟ್ರ್ಯಾಕ್ಟರ್ ಮೂಲಕ ತಮಿಳುನಾಡಿನ ದಬ್ಬಾಗುಳೇಶ್ವರ ದೇವಾಲಯಕ್ಕೆ ತೆರಳಿದ್ದರು. ವೇಳೆ ಕನಕಪುರದ ಗಡಿ ಭಾಗದಲ್ಲಿ ಟ್ರ್ಯಾಕ್ಟರ್ನ ಬ್ರೇಕ್ ಕಟ್ ಆಗಿ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದಲ್ಲಿ ಪುಟ್ಟಲಿಂಗಮ್ಮ(65), ಈರಮ್ಮ(80), ಗೌರಮ್ಮ(60), ಕೆಂಪಮ್ಮ(75)ಹಾಗೂ ಮಂಗಳಾ(35) ಸ್ಥಳದಲ್ಲೇ ಸಾವನ್ನಪಿದ್ದಾರೆ. ಮೃತರು ಜಿಲ್ಲೆಯ ಕನಕಪುರ ತಾಲೂಕಿನ ಕೆರಳಾಳುಸಂದ್ರ ಗ್ರಾಮದವರು.
ಈ ವೇಳೆ ಬ್ರೇಕ್ ತುಂಡಾಗಿ ರಸ್ತೆ ತಿರುವಿನಲ್ಲಿ ವಾಹನ ಮಗುಚಿತು. ಟ್ರ್ಯಾಕ್ಟರ್ ಕೆಳಗೆ ಸಿಲುಕಿ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಹುಣಸನಹಳ್ಳಿ ಸರ್ಕಾರಿ ಆಸ್ಪತ್ರೆ ಹಾಗೂ ತಮಿಳುನಾಡು ಗಡಿಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.