ಮನ್ ಕಿ ಬಾತ್ ನಲ್ಲಿ ಕಡಲತೀರ ಸ್ವಚ್ಛಗೊಳಿಸಿದ ನವ ಜೋಡಿಗಳನ್ನು ಶ್ಲಾಘಿಸಿದ ಮೋದಿ ! | Janata news
ಉಡುಪಿ : ಕಡಲ ತೀರವನ್ನು ಸ್ವಚ್ಛಗೊಳಿಸಿದ ಉಡುಪಿ ಜಿಲ್ಲೆಯ ನವದಂಪತಿಗಳ ಕೆಲಸವನ್ನು ಪ್ರಧಾನಿ ಮೋದಿ ಇಂದಿನ ಮನ್ ಕಿ ಬಾತ್ ನಲ್ಲಿ ತಿಳಿಸಿ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ಕಡಲತೀರವನ್ನು ಸ್ವಚ್ಚಗೊಳಿಸಿ ಮಧುಚಂದ್ರಕ್ಕೆ ಹೋಗುವ ಸಂಕಲ್ಪ ಮಾಡಿದ್ದ ಬೈಂದೂರಿನ ಅನುದೀಪ್ ಹೆಗಡೆ ಹಾಗೂ ಮಿನುಷಾ ಕಾಂಚನ್ ದಂಪತಿಯ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಈ ವರ್ಷದ ಕೊನೆಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ ಮಾತನಾಡುತ್ತಾ, ಸೋಮೇಶ್ವರ ಬೀಚ್ ನಲ್ಲಿದ್ದ 800 ಕೆಜಿಗೂ ಅಧಿಕ ಕಸವನ್ನು ತೆಗೆದು ಸ್ವಚ್ಛಗೊಳಿಸಿದ ಅನುದೀಪ್ ಹಾಗೂ ವಿನುಷ ಜೋಡಿಯನ್ನು ಶ್ಲಾಘಿಸುತ್ತೇನೆ ಎಂದು ತಿಳಿಸಿದರು.
ನವೆಂಬರ್ 27ರಂದು ಸೋಮೇಶ್ವರ ಕಡಲ ತೀರದಲ್ಲಿ ಸ್ವಚ್ಛಗೊಳಿಸುವ ಮೂಲಕ ತಮ್ಮ ಪರಿಸರಪ್ರೇಮವನ್ನು ತೋರಿಸಿಕೊಂಡಿದ್ದಾರೆ ಬೈಂದೂರು ಮೂಲದ ನವ ಜೋಡಿಗಳು ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದರು.