ಪ್ರೀತಿಗೆ ಪೋಷಕರ ವಿರೋಧ: ಪ್ರೇಮಿಗಳ ಆತ್ಮಹತ್ಯೆ | Janata news
ಯಾದಗಿರಿ : ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಶರಣಬಸವ(23) ಮತ್ತು ಶೇಖಮ್ಮ(19) ಆತ್ಮಹತ್ಯೆಗೆ ಮಾಡಿಕೊಂಡ ಪ್ರೇಮಿಗಳು. ಜಿಲ್ಲೆಯ ವಡಗೇರಾ ತಾಲೂಕಿನ ಗುಂಡಗುರ್ತಿ ಗ್ರಾಮದಲ್ಲಿ ಘಟನೆ ನಡೆದಿದೆ.
ಬೆಂಗಳೂರಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಶರಣಬಸವ ಸಂಕ್ರಾಂತಿ ಹಬ್ಬಕ್ಕೆ ಯಾದಗಿರಿಗೆ ಬಂದಿದ್ದ. ಶೇಖಮ್ಮ ಊರಲ್ಲೇ ಕಾಲೇಜಿಗೆ ಹೋಗುತ್ತಿದ್ದಳು. ಇಬ್ಬರ ಮಧ್ಯೆ ಸುಮಾರು ಎರಡು ವರ್ಷದಿಂದ ಪ್ರೀತಿ ಇತ್ತು. ಆದರೆ ಕುಟುಂಬದವರು ಮದುವೆಗೆ ಒಪ್ಪಿರಲಿಲ್ಲ ಎನ್ನಲಾಗಿದೆ.
ಮನೆಯಲ್ಲಿರುವ ಪೈಪ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :Yadagiri