ಕಾಡಿನಲ್ಲಿದ್ದ 6.70 ಲಕ್ಷ ಮೌಲ್ಯದ ಅಕ್ರಮ ಮದ್ಯ ಜಪ್ತಿ ಮಾಡಿದ ಅಬಕಾರಿ ತಂಡ! | Janata news
ಕಾರವಾರ : ಕಾರವಾರ ತಾಲ್ಲೂಕಿನ ಮಾಜಾಳಿಯ ಅರಣ್ಯ ಪ್ರದೇಶದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಬರೋಬ್ಬರಿ ರೂ.6.70 ಲಕ್ಷ ಮೌಲ್ಯದ ಅಕ್ರಮ ಮದ್ಯವನ್ನು ವಶ ಪಡಿಸಿಕೊಂಡಿದ್ದಾರೆ.
ಗೋವಾ ರಾಜ್ಯದ ಪರವಾನಗಿ ಹೊಂದಿದ್ದ ಮದ್ಯಗಳನ್ನು ದಾಸ್ತಾನು ಮಾಡಿರುವ ಬಗ್ಗೆ ಖಚಿತವಾದ ಮಾಹಿತಿಯನ್ನು ಪಡೆದ ಅಬಕಾರಿ ಇಲಾಖೆ ಅಧಿಕಾರಿಗಳಿ ದಾಳಿ ಮಾಡಿದ್ದಾರೆ.
ಒಟ್ಟು 1,423 ಲೀಟರ್ ಗೋವಾ ಮದ್ಯ ಹಾಗೂ 228 ಲೀಟರ್ ಗೋವಾ ಬಿಯರ್ ಅನ್ನು ಕಾಡಿನಲ್ಲಿ ಅಡಗಿಸಿಡಲಾಗಿತ್ತು. ಅಕ್ರಮವಾಗಿ ಗೋವಾದಿಂದ ಮದ್ಯವನ್ನು ಕರ್ನಾಟಕದ ಗಡಿಯೊಳಗೆ ತಂದು ದಾಸ್ತಾನು ಮಾಡಲಾಗಿತ್ತು.
ಅಬಕಾರಿ ನಿರೀಕ್ಷಕರಾದ ದಯಾನಂದ ಎಸ್.ಬಿ, ಜಿಲ್ಲಾ ತಂಡದ ಅಬಕಾರಿ ನಿರೀಕ್ಷಕರಾದ ಬಸವರಾಜ ಕರವಿನಕೊಪ್ಪ, ಸಿಬ್ಬಂದಿ ಶಿವಾನಂದ ಕೊರಡ್ಡಿ, ಚಂದ್ರಶೇಖರ ಪಾಟೀಲ್, ಪ್ರವೀಣ ಕುಮಾರ್ ಕಲ್ಲೊಳ್ಳಿ, ವೀರೇಶ, ನಾಗರಾಜ, ಶ್ರೀನಿವಾಸ, ರವಿ ನಾಯ್ಕ, ಇಮ್ತಿಯಾಜ್ ತಂಡದಲ್ಲಿದ್ದರು.