ಮದುವೆ ನಿಶ್ಚಯವಾಗಿದ್ದ ಮಧುಮಗಳಿಗೆ ಬಲವಂತವಾಗಿ ತಾಳಿ ಕಟ್ಟಿ ಎಳೆದೊಯ್ದ ಮಾಜಿ ಪ್ರೇಮಿ, ಯುವಕನ ವಿರುದ್ಧ ದೂರು ದಾಖಲು! | Janata news
ಹಾಸನ : ಸೋಮವಾರ ವಿವಾಹ ನಿಗದಿಯಾಗಿದ್ದ ಮಧುಮಗಳಿಗೆ ಯುವಕನೊಬ್ಬ ಬಲವಂತವಾಗಿ ತಾಳಿಕಟ್ಟಿದ ಘಟನೆ ಜಿಲ್ಲೆಯ ಸಕಲೇಶಪುರ ಪಟ್ಟಣದ ಕುಶಾಲನಗರ ಬಡಾವಣೆಯಲ್ಲಿ ನಡೆದಿದೆ.
ಜನವರಿ 25 ಕ್ಕೆ ಸುಜಿತ್ ಕೃಷ್ಣ ಎಂಬುವವರ ಜೊತೆ ಯುವತಿಯ ಮಧುವೆ ನಿಶ್ಚಯವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಧುವೆ ನಿಶ್ಚಯಿಸಿ ಕುಟುಂಬದವರು ಎಲ್ಲಾ ತಯಾರಿ ಮಾಡಿಕೊಂಡಿದ್ದರು.
ಆದರೆ, ಮದುವೆ ನಿಶ್ಚಯವಾಗಿರುವ ಹುಡುಗಿಯನ್ನು ತಾನು ಪ್ರೀತಿಸುತ್ತಿರುವುದಾಗಿ ಸತೀಶ್ ಸ್ನೇಹಿತರ ಬಳಿ ಹೇಳಿಕೊಂಡಿದ್ದ. ಸತೀಶ್ ಆತ್ಮಹತ್ಯೆ ಯತ್ನವೂ ನಡೆಸಿದ್ದನಂತೆ. ಹೀಗಾಗಿ ಆತನ ಸ್ನೇಹಿತರು ಸತೀಶ್ನನ್ನು ಯುವತಿಯ ಮನೆಗೆ ಕರೆದೊಯ್ದು ಅರಿಶಿಣಕೊಂಬು ಕಟ್ಟಿಸಿ ಅಲ್ಲೇ ಮದುವೆ ಮಾಡಿಸಿರುವ ಆರೋಪ ಮಾಡಲಾಗಿದೆ.
ತಮ್ಮ ಮಗಳಿಗೆ ಇಷ್ಟವಿಲ್ಲದಿದ್ದರೂ ತಮ್ಮನ್ನ ಬೆದರಿಸಿ ಬಲವಂತವಾಗಿ ಮನೆಯೊಳಗೇ ಅರಿಶಿಣಕೊಂಬು ಕಟ್ಟಿ ಮಧುವೆ ಮಾಡಿದ್ದಾರೆ. ಹೀಗಾಗಿ ತಮ್ಮ ಮಗಳ ಪ್ರಾಣಕ್ಕೆ ಬೆದರಿಕೆ ಇದ್ದು ಆಕೆಯನ್ನು ರಕ್ಷಿಸಿ ಎಂದು ಯುವತಿಯ ತಾಯಿಯಿಂದ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.