Wed,Apr24,2024
ಕನ್ನಡ / English

ಮೈತ್ರಿ ಸರ್ಕಾರದಲ್ಲಿ ನಾನು ಕ್ಲರ್ಕ್‌ನಂತೆ ಇದ್ದೆ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ | Janata news

31 Jan 2021
1256

ಬಾಗಲಕೋಟೆ : ಮೈತ್ರಿ ಸರ್ಕಾರದಲ್ಲಿ ನಾನು ಕ್ಲರ್ಕ್‌ನಂತೆ ಇದ್ದೆ ಎಂದಿದ್ದಾರೆ.

ಜಿಲ್ಲೆಯ ನವನಗರದ ಕಾಳಿದಾಸ‌ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಜೆಡಿಎಸ್ ಸಂಘಟನಾ ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ನೀಡಿದ್ದರು.

ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟಿಸುವ ಸಲುವಾಗಿ ಕೋವಿಡ್ ಬಳಿಕ ಬಾಗಲಕೋಟೆಯಲ್ಲಿ ಮೊದಲ‌ ಬಾರಿಗೆ ಜೆಡಿಎಸ್ ಸಂಘಟನಾ ಸಮಾವೇಶದಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಮೈತ್ರಿ ಸರ್ಕಾರದಲ್ಲಿ ನಾನು ಕ್ಲರ್ಕ್‌ನಂತೆ ಇದ್ದೆ. ಮೈತ್ರಿ ಸರ್ಕಾರದಲ್ಲಿ ನನಗೆ ಪೂರ್ಣ ಸ್ವಾತಂತ್ರ್ಯವಿರಲಿಲ್ಲ. ನಾನು ನಿರ್ಧಾರ ತೆಗೆದುಕೊಳ್ಳಲು ಆಗಿರಲಿಲ್ಲ ಎಂದು ಹೇಳಿದರು.

ಒಂದು ಕಡೆ ಸಿದ್ದರಾಮಯ್ಯ ಒತ್ತಡ ಇತ್ತು. ಇನ್ನೊಂದು ನೀರಾವರಿ ಹಳೆ ಯೋಜನೆ ಮುಂದುವರಿಸಬೇಕಿತ್ತು. ಹಾಗೆ ಮತ್ತೊಂದು ಕಡೆ ರೈತರ ಸಾಲಮನ್ನಾ ಬಗ್ಗೆ ಬಿಜೆಪಿಯವರು ಒತ್ತಡ ಹೇರುತ್ತಿದ್ದರು. ಸಾಲ‌ಮನ್ನಾ ಮಾಡದೆ ಟೋಪಿ ಹಾಕುತ್ತಿದ್ದೀರಿ ಎಂದು ಬಿಜೆಪಿಯವರು ಹೇಳುತ್ತಿದ್ದರು ಎಂದು ಹೆಚ್​ಡಿಕೆ ತಿಳಿಸಿದರು.

ನಮ್ಮದು ಡಬಲ್ ಇಂಜಿನ್ ಸರ್ಕಾರ ಎಂದು ಬಿಜೆಪಿಯವರು ಹೇಳುತ್ತಾರೆ. ಮೋದಿ ಒಂದು ಇಂಜಿನ್ ಆದರೆ ಯಡಿಯೂರಪ್ಪ ಇನ್ನೊಂದು ಇಂಜಿನ್ ಅಂತೆ. ಆದರೆ ಡಬಲ್ ಇಂಜಿನ್ ಇಟ್ಟುಕೊಂಡು ಏಕೆ ಕೆಲಸ ಆಗುತ್ತಿಲ್ಲ. ಇಂಜಿನ್​ಗಳ ಬೋಗಿಗಳು ಏಕೆ ಎಲ್ಲೆಲ್ಲೋ ಹೋಗಿಬಿಟ್ಟಿವೆ. ಬರಿ ಇಂಜಿನ್ ಮಾತ್ರ ಇವೆ ಬೋಗಿಗಳಿಲ್ಲ. ಬರಿ ಇಂಜಿನ್ ಇಟ್ಟುಕೊಂಡು ಏನು ಮಾಡುವುದಕ್ಕೆ ಆಗುವುದಿಲ್ಲ ಎಂದು ಡಬಲ್ ಇಂಜಿನ್​ ಬಗ್ಗೆ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ.

ಈ ದೇಶದ ವ್ಯವಸ್ಥೆಯಲ್ಲಿ ಅಕ್ರಮ, ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡುವುದು ವ್ಯರ್ಥ. ನನ್ನ 12 ವರ್ಷದ ರಾಜಕೀಯ ಅನುಭವ ಇದು. ಇದರಿಂದ ಕೆಲವರಿಗೆ ಸಹಾಯ ಆಗಿರಬಹುದು. ಅದೇನೋ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿರುವಂತೆ ಸಿಡಿಯನ್ನು ಕೆಲವರು ಬಳಕೆ ಮಾಡುಕೊಂಡಿರಬಹುದು. ಆದರೆ ನಾನು ಆ ಸಿಡಿಯ ಪಾಲುದಾರ ಅಲ್ಲ. ಶ್ರಮಪಟ್ಟು ಯಾವುದೋ ರೀತಿಯಿಂದ ಕಷ್ಟಪಟ್ಟು ಸರ್ಕಾರ ಮಾಡಿದ್ದೀರಿ. ಖಾತೆ ಕ್ಯಾತೆ ಬಿಟ್ಟು ಜನರ ಸಮಸ್ಯೆಗಳ‌ ಕಡೆ ಗಮನ ಕೊಡಿ ಎಂದರು.

ಸಮಾವೇಶದಲ್ಲಿ‌ ಮಾಜಿ ಸಚಿವ ಬಸವರಾಜ ಹೊರಟ್ಟಿ, ಬಂಡೆಪ್ಪ ಕಾಶಂಪೂರ್,ಮಾಜಿ ಶಾಸಕ ಕೋಣರೆಡ್ಡಿ, ಬಾಗಲಕೋಟೆ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹನಮಂತ ಮಾವಿನಮರ ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ನಾಯಕರು, ಜಿಲ್ಲೆಯ ವಿವಿಧ ತಾಲೂಕುಗಳ‌ ಕಾರ್ಯಕರ್ತರು ಭಾಗಿಯಾಗಿದ್ದಾರೆ.

RELATED TOPICS:
English summary :HD Kumaraswamy

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...