ಲಾರಿ-ಬೈಕ್ ಅಪಘಾತ: ಗವಿಸಿದ್ದೇಶ್ವರ ಜಾತ್ರೆಗೆ ತೆರಳಿದ್ದ ಇಬ್ಬರ ಸಾವು | Janata news
ಕೊಪ್ಪಳ : ಲಾರಿ-ಬೈಕ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ. ಇವರು ಜಾತ್ರೆಗೆಂದು ಕೊಪ್ಪಳಕ್ಕೆ ಆಗಮಿಸಿದ್ದರು ಎನ್ನಲಾಗಿದೆ.
ಮೃತರನ್ನು ಕುಕನೂರು ಪಟ್ಟಣದ ಗಣೇಶ (21) ಹಾಗೂ ರಾಧಿಕಾ (19) ಎಂದು ಗುರುತಿಸಲಾಗಿದೆ. ಆದರೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಲಾರಿಗೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ದುರ್ಘಟನೆ ನಡೆದ ಸ್ಥಳಕ್ಕೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
RELATED TOPICS:
English summary :Accident in Koppala