ಯುವತಿಯೊಂದಿಗೆ ಮದುವೆ ಕ್ಯಾನ್ಸಲ್: ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ! | Janata news
ದೊಡ್ಡಬಳ್ಳಾಪುರ : ಆಂಧ್ರಪ್ರದೇಶದ ಹಿಂದೂಪುರದ ಯುವಕನ ಮದುವೆ ಬೆಂಗಳೂರಿನ ಯುವತಿಯ ಜೊತೆ ಮದುವೆ ನಿಶ್ಚಯವಾಗಿತ್ತು. ಆದರೆ, ಯುವತಿಯ ಕುಟುಂಬಸ್ಥರು ಆ ಮದುವೆಯನ್ನು ಕ್ಯಾನ್ಸಲ್ ಮಾಡಿದ್ದರು. ಈ ವಿಷಯ ತಿಳಿದ ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ ನಗರದ ಮುತ್ತೂರು ಸಮೀಪ ಈ ಘಟನೆ ನಡೆದಿದೆ. ಆಂಧ್ರದ ಅನಂತಪುರ ಜಿಲ್ಲೆಯ ಧರ್ಮಾವರಂ ತಾಲೂಕಿನ ಯರಗುಂಟಪಲ್ಲಿ ನಿವಾಸಿ ಹರಿ (28) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೃತ ವ್ಯಕ್ತಿಗೆ ಬೆಂಗಳೂರಿನ ಹುಡುಗಿ ಜೊತೆ ಮದುವೆ ನಿಶ್ಚಯವಾಗಿತ್ತು.
ಹುಡುಗಿಯನ್ನು ನೋಡುವ ಸಲುವಾಗಿ ಹೈದರಾಬಾದ್ನಿಂದ ಬೆಂಗಳೂರಿಗೆ ಹರಿ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಆದರೆ, ಈ ಸಮಯದಲ್ಲಿ ಹುಡುಗಿ ಕುಟುಂಬದವರು ಮದುವೆಯನ್ನು ಕ್ಯಾನ್ಸಲ್ ಮಾಡಿರುವ ವಿಷಯ ತಿಳಿದಿದೆ.
ಬಳಿಕ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದಲ್ಲಿ ಇಳಿದು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಮದುವೆ ಕ್ಯಾನ್ಸಲ್ ಆಗಲು ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.