ಶೃಂಗೇರಿಯಲ್ಲಿ 15 ವರ್ಷದ ಬಾಲಕಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಅತ್ಯಾಚಾರ! | Janata news
ಚಿಕ್ಕಮಗಳೂರು : 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಕಳೆದ ಐದು ತಿಂಗಳಿಂದ ಸುಮಾರು 30ಕ್ಕೂ ಹೆಚ್ಚು ಜನ ಅತ್ಯಾಚಾರವೆಸಗಿರೋ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ಸಂತ್ರಸ್ತ ಬಾಲಕಿ ಮೂಲತಃ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನವಳು. ತಾಯಿ ತೀರಿಕೊಂಡ ಬಳಿಕ ತಂದೆ ಮತ್ತೊಂದು ಮದುವೆಯಾಗಿ ಅಲ್ಲೇ ವಾಸವಿದ್ದಾನೆ. ನೊಂದ ಬಾಲಕಿ ಓದು ಮುಂದುವರೆಸಲು ಚಿಕ್ಕಮ್ಮ ಎಂದು ಹೇಳಿಕೊಳ್ಳುತ್ತಿದ್ದ ಶೃಂಗೇರಿಯ ಗೀತಾ ಎಂಬುವರೊಂದಿಗೆ ಶೃಂಗೇರಿಯಲ್ಲಿ ವಾಸವಿದ್ದಳು.
ಈ ವೇಳೆ ಚಿಕ್ಕಮ್ಮನ ಜೊತೆ ಕ್ರಷರ್ ಕೆಲಸಕ್ಕೆ ಹೋಗಿದ್ದಾಗ ಆಕೆ ಮೇಲೆ ಅತ್ಯಾಚಾರವೆಸಗಿದ ಸ್ಥಳಿಯ ಯುವಕನೋರ್ವ, ಆ ಕೃತ್ಯವನ್ನ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡು ಬಾಲಕಿಯನ್ನ ಬೆದರಿಸುತ್ತಿದ್ದನಂತೆ ಎನ್ನಲಾಗಿದೆ.
15 ವರ್ಷದ ಬಾಲಕಿ ಮೇಲೆ ಕಿಕ್ರೆ ಸ್ಮಾಲ್ ಅಭಿ ಮತ್ತು ಆತನ ಸ್ನೇಹಿತರಾದ ಗಿರೀಶ್ ಆನೆಗುಂದ, ಹೊಳೆಕೊಪ್ಪದ ವಿಕಾಶ್, ಮಣಿಕಂಠ, ಸಂಪತ್ ನೆಮ್ಮಾರ್, ಶೃಂಗೇರಿಯ ಅಶ್ವತ್ ಗೌಡ, ಆನೆಗುಂದದ ರಾಜೇಶ್, ಅಮಿತ್, ಕುರುಬಗೆರೆಯ ಸಂತೋಷ, ಹೆಗ್ಗದ್ದೆಯ ದೀಕ್ಷಿತ್, ಹೆರೂರಿನ ಸಂತೋಷ್, ನಿರಂಜನ್ ಕಿಗ್ಗ, ಶೃಂಗೇರಿಯ ನಯನಗೌಡ, ಅಭಿಗೌಡ, ಖಾಂಡ್ಯದ ಯೋಗೀಶ್ ಸೇರಿ 30ಕ್ಕೂ ಹೆಚ್ಚು ಮಂದಿ ನಿರಂತರ ಅತ್ಯಾಚಾರ ನಡೆಸಿ ಲೈಂಕಿಗ ದೌರ್ಜನ್ಯವೆಸಗಿದ್ದಾರೆ. ಈ ದುಷ್ಕೃತ್ಯಕ್ಕೆ ಸಂತ್ರಸ್ತ ಬಾಲಕಿಯ ಚಿಕ್ಕಮ್ಮ ಗೀತಾಳ ಸಹಕಾರವೂ ಇದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಕಳೆದ ಸೆಪ್ಟೆಂಬರ್ನಿಂದ ಸುಮಾರು 30ಕ್ಕೂ ಹೆಚ್ಚು ಜನ ಅತ್ಯಾಚಾರ ಎಸಗಿದ್ದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಜಿ. ಸುಬ್ರಹ್ಮಣ್ಯ ನೀಡಿದ ದೂರಿನನ್ವಯ ಶೃಂಗೇರಿ ಠಾಣೆಯಲ್ಲಿ 17 ಜನರ ವಿರುದ್ಧ ಎಫ್.ಐ.ಆರ್.ದಾಖಲಾಗಿದೆ. ಈ ಕೃತ್ಯಕ್ಕೆ ಸಹಕಾರ ನೀಡಿದ್ದಾರೆಂದು ಬಾಲಕಿಯ ಚಿಕ್ಕಮ್ಮ ಎಂದು ಹೇಳಿಕೊಂಡಿದ್ದ ಗೀತಾ ಎಂಬುವರ ಮೇಲೂ ಪ್ರಕರಣ ದಾಖಲಾಗಿದೆ.
ಸದ್ಯ ಎಂಟು ಜನರನ್ನು ಬಂಧಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿ ತನಿಖೆ ಮುಂದುವರೆಸಿದ್ದಾರೆ.