ಟ್ರಾಕ್ಟರ್ ಪಲ್ಟಿ: 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ | Janata news
ರಾಯಚೂರು : ಟ್ರ್ಯಾಕ್ಟರ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಗೋರೆಬಾಳ ಗ್ರಾಮದ ಬಳಿಯ ಸಿಂಧನೂರು-ಗಂಗಾವತಿ ಹೆದ್ದಾರಿಯಲ್ಲಿ ನಡೆದಿದೆ.
ಸಿಂಧನೂರು ತಾಲೂಕಿನ ಕುರಗೋಡ ಗ್ರಾಮ ನಿವಾಸಿಗಳು, ಅಂಬಾಮಠದ ಜಾತ್ರೆಗಾಗಿ ತೆರಳಿದ್ದರು. ಜಾತ್ರೆ ಮುಗಿಸಿಕೊಂಡು ಸೋಮಲಾಪುರದಿಂದ ಟ್ರ್ಯಾಕ್ಟರ್ ನಲ್ಲಿ ಕುರಗೋಡುವಿಗೆ ವಾಪಾಸ್ ಆಗುತ್ತಿದ್ದಂತ ವೇಳೆ, ಸಿಂಧನೂರು ತಾಲೂಕಿನ ಗೋರೆಬಾಳ ಗ್ರಾಮದ ಬಳಿಯ ಸಿಂಧನೂರು-ಗಂಗಾವತಿ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.
ಟ್ರ್ಯಾಕ್ಟರ್ ನಲ್ಲಿದ್ದಂತ ಮಹಿಳೆಯರು, ಮಕ್ಕಳು ಸೇರಿದಂತೆ 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಕ್ಕಳನ್ನ ಸಿಂಧನೂರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ತುರವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.