ಜನರಲ್ ತಿಮ್ಮಯ್ಯ ಮ್ಯೂಸಿಯಂ ಲೋಕಾರ್ಪಣೆ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ | Janata news
ಮಡಿಕೇರಿ : ಭಾರತದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ವೀರ ಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ವಸ್ತು ಸಂಗ್ರಹಾಲಯವನ್ನು ಉದ್ಘಾಟಿಸಿದರು.
ಜನರಲ್ ಕೆ.ಎಸ್. ತಿಮ್ಮಯ್ಯ ಅವರು ಹುಟ್ಟಿದ ಮನೆ ಸನ್ನಿಸೈಡ್ ಅನ್ನು ಈಗ ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲಾಗಿದ್ದು, ತಿಮ್ಮಯ್ಯ ಅವರ ಬಾಲ್ಯದಿಂದ ಸೇನಾ ಬದುಕಿನವರೆಗೆ ಅನೇಕ ಘಟನೆಗಳು, ಭಾರತೀಯ ಸೇನಾಪಡೆಯ ಮಹತ್ವ, ಹಾಗೂ ಯುದ್ಧ ಸ್ಮಾರಕಗಳನ್ನು ಅವರು ಈ ವಸ್ತು ಸಂಗ್ರಹಾಲಯದಲ್ಲಿ ಇದೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಜನರಲ್ ಕೆ.ಎಸ್.ತಿಮ್ಮಯ್ಯ ವಸ್ತುಸಂಗ್ರಹಾಲಯ ಉದ್ಘಾಟನೆಗೂ ಮೊದಲು ವಸ್ತುಸಂಗ್ರಹಾಲಯ ಆವರಣದಲ್ಲಿರುವ ಯುದ್ದ ಟ್ಯಾಂಕ್, ಯುದ್ಧ ವಿಮಾನ ವೀಕ್ಷಿಸಿದರು. ನಂತರ ಯುದ್ಧ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು. ಇದಕ್ಕೂ ಮುನ್ನ ಅವರು ಭಾಗಮಂಡಲದ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.
ಕೆ.ಎಸ್. ತಿಮ್ಮಯ್ಯ ಅವರ ಸೇನಾ ಸಮವಸ್ತ್ರ, ತಿಮ್ಮಯ್ಯ ಅವರು ಅವರ ತಾತನೊಂದಿಗೆ ಸನ್ನಿಸೈಡ್ನಲ್ಲಿ ಮಲಗುತ್ತಿದ್ದ ಗತಕಾಲದ ನೆನಪು ತರುವ ಹಾಸಿಗೆ, ಮಿನಿ ರಾಕೆಟ್ ಲಾಂಚರ್, ಯುದ್ಧದಲ್ಲಿ ಬಳಸಲಾಗುತ್ತಿದ್ದ ಬಂದೂಕುಗಳು ಮುಂತಾದವನ್ನು ವೀಕ್ಷಿಸಿದರು.
ಮಡಿಕೇರಿ ನಗರದಲ್ಲಿ ಶನಿವಾರ ನಡೆದ ಜ.ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಹಾಗೂ ಅವರ ಧರ್ಮಪತ್ನಿ ಸವಿತಾ, ಚೀಫ್ ಆಫ್ ದಿ ಡಿಪೇನ್ಸ್ ಬಿಪಿನ್ ರಾವತ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಅರವಿಂದ ಲಿಂಬಾವಳಿ ಭಾಗವಹಿಸಿದ್ದರು.