ರೈಲ್ವೆ ಹಳಿಯ ಮೇಲೆ ಯುವಕನ ಶವ ಪತ್ತೆ! | Janata news
ಮೈಸೂರು : ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ನಗರದಲ್ಲಿ ಬುಧವಾರ ನಡೆದಿದೆ.
ಏಕಲವ್ಯ ಸರ್ಕಲ್ ಬಳಿ ಇರುವ ರೈಲ್ವೆ ಮೇಲ್ಸೇತುವೆ ಏರಿರುವ ಯುವಕನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಈತನನ್ನು ಚಾಮರಾಜ ಮೊಹಲ್ಲಾದ ನಿವಾಸಿ ಶ್ರೀನಿವಾಸ್ (25) ಎಂದು ಗುರುತಿಸಲಾಗಿದೆ. ಯಾರೋ ಕೊಲೆ ಮಾಡಿ ರೈಲ್ವೆ ಹಳಿಯ ಮೇಲೆ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.
ಶ್ರೀನಿವಾಸ್ ತನ್ನ ಪದವಿಯನ್ನು ಮುಗಿಸಿ ಜಿಮ್ ಒಂದರಲ್ಲಿ ಟ್ರೈನರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಶ್ರೀನಿವಾಸ್ ಆತ್ಮಹತ್ಯೆ ಮಾಡಿಕೊಂಡಿಲ್ಲ. ಈತನ ಸಾವಿನ ಹಿಂದೆ ಹಲವು ಅನುಮಾನಗಳಿದ್ದು ಕೂಡಲೇ ಸೂಕ್ತ ತನಿಖೆಯಾಗಬೇಕೆಂದು ಒತ್ತಾಯಿಸಲಾಗುತ್ತಿದೆ.
ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.