ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರವಲ್ಲ. ಯಡಿಯೂರಪ್ಪ ಕುಟುಂಬದ ಸರ್ಕಾರ: ಎಚ್ ಡಿಕೆ | Janata news
ಶಿವಮೊಗ್ಗ : ಕರ್ನಾಟಕದಲ್ಲಿರುವುದು ಬಿಜೆಪಿ ಸರ್ಕಾರವಲ್ಲ. ಬಿ.ಎಸ್. ಯಡಿಯೂರಪ್ಪನವರ ಕುಟುಂಬದ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದರು.
ಇಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಹೆಚ್ಡಿಕೆ, ಕಳೆದ ಒಂದು ವರ್ಷದಿಂದ ಕೊರೊನಾ ಇದ್ದರಿಂದ ನಾನು ಯಾವ ವಿಷಯಗಳನ್ನೂ ಮಾತನಾಡಿಲ್ಲ. ರೈತರ ಬೆಳೆಗಳು ನಾಶವಾಗಿವೆ. ಭಗವಂತನ ದಯೆಯಿಂದ ನಾನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದೆ. ಜುಲೈನಲ್ಲಿ ಅಧಿಕಾರದಿಂದ ನಿರ್ಗಮಿಸಿದೆ, ಅಲ್ಲಿಂದ ಇಲ್ಲಿಯವರೆಗೆ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ ಎಂದರು.
ಕಳೆದೊಂದು ವರ್ಷದಿಂದ ನಾನು ನಿಷ್ಕ್ರಿಯನಾಗಿದ್ದೇನೆ ಅದಕ್ಕೆ ಕಾರಣ ವೈದ್ಯರ ಸಲಹೆ. ನಾನು ಪಕ್ಷದ ಸಂಘಟನೆಗೆ ಚಾಲನೆ ನೀಡಲು ತೀರ್ಮಾನ ಮಾಡಿದ್ದೇನೆ ಎಂದರು.
ಕಬ್ಬು ಬೆಳಗಾರರಿಗೆ ಹಣ ನೀಡದೆ ಸರ್ಕಾರ ಟೋಪಿ ಹಾಕಿದೆ. ಕರ್ನಾಟಕದಲ್ಲಿರುವುದು ಬಿಜೆಪಿ ಸರ್ಕಾರವಲ್ಲ. ಯಡಿಯೂರಪ್ಪನವರ ಕುಟುಂಬದ ಸರ್ಕಾರ ಅಂತ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಜೆಟ್ ನ ಕಾರ್ಯಕ್ರಮಗಳನ್ನು ವಿಭಜಿಸಿ ಶಿವಮೊಗ್ಗದ ನಗರದ ಅಭಿವೃದ್ದಿಗೆ ನೀಡಲಾಗಿತ್ತು. ನಾನು ಶಿವಮೊಗ್ಗದ ಕೆಲ ಪ್ರದೇಶಗಳನ್ನ ನೋಡಿದ್ದೇನೆ. ಅವುಗಳ ಅಭಿವೃದ್ಧಿ ಆಗಿಲ್ಲ. ಎರಡು ವರ್ಷದ ಬಜೆಟ್ ಹಣ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದರು.
ಮೈತ್ರಿ ಸರ್ಕಾರ ಪತನವಾದ ಬಳಿಕ ಬಂದ ಸರ್ಕಾರ ಎರಡು ವರ್ಷದಲ್ಲಿ ಮಾಡಿರುವ ಘೋಷಣೆಗಳು, ಮತ್ತು ಜನರ ಕಷ್ಟಗಳಿಗೆ ಹೇಗೆ ಪ್ರತಿಕ್ರೀಯೆ ನೀಡಿದ್ದಾರೆ ಎಂಬುದನ್ನು ನಾನು ಕಂಡಿದ್ದೇನೆ ಎಂದರು. ಮುಂದಿನ ದಿನಗಳಲ್ಲಿ ಜೆಡಿಎಸ್ ಸ್ವತಂತ್ರವಾಗಿ, ಯಾವ ಪಕ್ಷದ ಆಶ್ರಯವಿಲ್ಲದೆ ಅಧಿಕಾರ ಹಿಡಿಯಲು ಸಂಘಟನೆ ಮಾಡಲಾಗುತ್ತದೆ ಎಂದರು.
ಕರ್ನಾಟಕದಲ್ಲಿರುವುದು ಬಿಜೆಪಿ ಸರ್ಕಾರವಲ್ಲ. ಬಿ.ಎಸ್. ಯಡಿಯೂರಪ್ಪನವರ ಕುಟುಂಬದ ಸರ್ಕಾರ ಎಂದು ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.
ಇದೇ ವೇಳೆ, ಮನೆಯಲ್ಲಿ ಟಿ.ವಿ, ಬೈಕು, ಫ್ರಿಡ್ಜ್ ಇದ್ದರೆ ಬಿಪಿಎಲ್ ಪಡಿತರ ಕಾರ್ಡ್ ರದ್ದು ಮಾಡಲಾಗುತ್ತದೆ ಎಂದು ಸಚಿವ ಉಮೇಶ್ ಕತ್ತಿ ನೀಡಿರೋ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯಿಸಿದ ಹೆಚ್ಡಿಕೆ ಆಹಾರ ಸಚಿವರ ಹೇಳಿಕೆ ಅತ್ಯಂತ ಬಾಲಿಷ ಹಾಗೂ ಜನ ಜನ ವಿರೋಧಿ ತೀರ್ಮಾನ.ಆಹಾರ ಸಚಿವರಿಗೆ ಪರಿಜ್ಞಾನ ಇಲ್ಲ. ಇದು ಅತ್ಯಂತ ಕೆಟ್ಟ ತೀರ್ಮಾನ ಎಂದರು.