ಸಿದ್ದರಾಮಯ್ಯ ಸರ್, ಯಶ್ ಅಣ್ಣ ಪ್ಲೀಸ್ ನನ್ನ ಈ ಅಂತಿಮ ಇಚ್ಛೆ ಈಡೇರಿಸಿ ಎಂದು ಪ್ರಾಣಬಿಟ್ಟ ಯುವಕ | Janata news
ಮಂಡ್ಯ : 25 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕೃಷ್ಣ ಎಂಬ ಯುವಕ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದ ಕೃಷ್ಣ(25) ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದನು. ರಾಕಿಂಗ್ ಸ್ಟಾರ್ ಯಶ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಪ್ಪಟ ಅಭಿಮಾನಿ ಕೂಡ ಆಗಿದ್ದನು. ಮೊನ್ನೆ ಕೆಲಸ ಮುಗಿಸಿ, ನಿನ್ನೆ ಕೆಲಸಕ್ಕೆ ರಜೆ ಹಾಕಿ ಮನೆಯಲ್ಲಿದ್ದಂತ ಕೃಷ್ಣ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಡೆತ್ನೋಟ್ನಲ್ಲಿ ಏನಿದೆ..?
ಸಾಯುವ ಮುನ್ನ ಡೆತ್ನೋಟ್ ಬರೆದಿಟ್ಟಿರುವ ಕೃಷ್ಣ, ನನ್ನನ್ನ ಎಲ್ಲರೂ ದಯವಿಟ್ಟು ಕ್ಷಮಿಸಿ. ನಿಮಗೆಲ್ಲಾ ನುಮಗೆಲ್ಲಾ ತುಂಬಾ ನೋವು ಕೊಟ್ಟಿದ್ದೀನಿ. ಅಮ್ಮ ನಿಗೆ ಒಬ್ಬ ಮಗನಾಗಿ, ಅಣ್ಣನಿಗೆ ತಮ್ಮನಾಗಿ, ಗೆಳೆಯರಿಗೆ ಒಂದೊಳ್ಳೆ ಸ್ನೇಹಿತನಾಗಿ, ನನ್ನ ಹುಡುಗಿಗೆ ಜೊತೆಗಾರನಾಗಲು ಬಾಳಸಂಗಾತಿಯಾಗಲು ವಿಫಲನಾಗಿದ್ದೇನೆ. ಅದಕ್ಕೋಸ್ಕರ ನಾನು ನಿಮ್ಮಿಂದ ದೂರವಾಗಬೇಕೆಂದು ತೀರ್ಮಾನಿಸಿ ನನ್ನ ಇಚ್ಚೆಯಂತೆ ಮರಣ ಹೊಂದುತ್ತಿದ್ದೇನೆ ಎಂದಿದ್ದಾನೆ.
ಜೊತೆಗೆ ನಟ ಯಶ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ತನ್ನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಬೇಕು ಎಂದು ಯುವಕ ಡೆತ್ನೋಟ್ನಲ್ಲಿ ಮನವಿ ಮಾಡಿದ್ದಾನೆ. ಏಕೆಂದರೆ ನಾನು ಇವರಿಬ್ಬರ ಅಪ್ಪಟ ಅಭಿಮಾನಿ. ದಯವಿಟ್ಟು ಅವರನ್ನು ನಾನು ಕೇಳಿಕೊಳ್ಳುತ್ತಿದ್ದೇನೆ. ನನ್ನ ಕೊನೆಯ ಆಸೆ ಈಡೇರಿಸಿ ಫ್ಲೀಸ್… ಹಾಗೆಯೇ ಇದಕ್ಕೆ ಮಾಧ್ಯಮ ಮಿತ್ರರು ಸಹ ಸಹಕರಿಸಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಕೃಷ್ಣ ಬರೆದಿದ್ದಾನೆ.
ಈ ಪ್ರಕರಣ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.