ಸಮಸ್ಯೆಯನ್ನು ಮೆಟ್ಟಿನಿಂತು ಬದುಕು ಕಟ್ಟಿಕೊಂಡವರನ್ನು ಅಭಿಮಾನಿ ಎನ್ನಲು ಹೆಮ್ಮೆಯಾಗುತ್ತದೆ - ಸಿದ್ದರಾಮಯ್ಯ | Janata news
ಮಂಡ್ಯ : ಸಮಸ್ಯೆಯನ್ನು ಮೆಟ್ಟಿನಿಂತು ಬದುಕು ಕಟ್ಟಿಕೊಂಡಾಗ ಇವನು ನನ್ನ ಅಭಿಮಾನಿ ಎಂದು ಹೇಳಲು ನಮಗೂ ಹೆಮ್ಮೆಯಾಗುತ್ತೆ. ಅಭಿಮಾನಿಯೊಬ್ಬನ ಸಾವು ಎಷ್ಟು ನೋವು ಕೊಡುತ್ತದೋ, ಆತ್ಮಹತ್ಯೆ ಅದರ ಎರಡು ಪಟ್ಟು ಕಾಡುತ್ತದೆ, ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ಆತ್ನಹತ್ಯೆಗೆ ಶರಣಾದ ಕೃಷ್ಣ ಎಂಬ ಯುವಕನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ಕುರಿತು ಅವರು ಹೇಳಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಹುಡುಗ ತನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರಬೇಕು ಅಂತ ಬರೆದಿಟ್ಟಿದ್ದ, ಆ ಕಾರಣ ಅತ್ಯಂತ ದುಃಖದಿಂದ ಆತನ ಕೊನೆ ಆಸೆ ಈಡೇರಿಸಿದ್ದೇನೆ, ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಮಸ್ಯೆಗಳಿಗೆ ಸಾವು ಎಂದಿಗೂ ಪರಿಹಾರವಲ್ಲ. ಸಮಸ್ಯೆಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಎಂದರೆ ತಮ್ಮ ಸಮಸ್ಯೆಯನ್ನು ಬೇರೊಬ್ಬರ ಹೆಗಲಿಗೆ ವರ್ಗಾಯಿಸಿದಂತೆ. ಸಾವಿನ ನಂತರವೂ ಸಮಸ್ಯೆ ಹಾಗೆಯೇ ಉಳಿಯುತ್ತೆ, ಆದರೆ ಅಮೂಲ್ಯ ಬದುಕೊಂದು ನಷ್ಟವಾಗುತ್ತೆ. ಕಷ್ಟಗಳು ಬಂದಾಗ ಎದುರಿಸುವ ಗಟ್ಟಿತನ ಪ್ರತಿಯೊಬ್ಬರಲ್ಲೂ ಬರಬೇಕು. ನೆನಪಿರಲಿ, ಸಮಸ್ಯೆಗಳು ತಾತ್ಕಾಲಿಕ, ಆದರೆ ತಮ್ಮವರನ್ನು ಕಳೆದುಕೊಂಡ ಕುಟುಂಬದವರ ನೋವು ಶಾಶ್ವತ, ಎಂದು ಸಲಹೆ ನೀಡಿದ್ದಾರೆ.
ಸಮಸ್ಯೆಯನ್ನು ಮೆಟ್ಟಿನಿಂತು ಬದುಕು ಕಟ್ಟಿಕೊಂಡಾಗ ಇವನು ನನ್ನ ಅಭಿಮಾನಿ ಎಂದು ಹೇಳಲು ನಮಗೂ ಹೆಮ್ಮೆಯಾಗುತ್ತೆ. ಅಭಿಮಾನಿಯೊಬ್ಬನ ಸಾವು ಎಷ್ಟು ನೋವು ಕೊಡುತ್ತದೋ, ಆತ್ಮಹತ್ಯೆ ಅದರ ಎರಡು ಪಟ್ಟು ಕಾಡುತ್ತದೆ.
ಯಾರ ಅಭಿಮಾನಿಯೇ ಆಗಲಿ, ಯಾವ ಧರ್ಮ, ತತ್ವ-ಸಿದ್ಧಾಂತವೇ ಇರಲಿ, ಆತ್ಮಹತ್ಯೆ ಮಾಡಿಕೊಳ್ಳುವಂತಹ ದುಡುಕಿನ ನಿರ್ಧಾರ ಬೇಡ. ಪ್ರತೀ ಜೀವವೂ ಅಮೂಲ್ಯ. ಕತ್ತಲು ಕಳೆದ ನಂತರ ಬೆಳಕು ಬಂದಂತೆ, ಕಷ್ಟಗಳು ದೂರಾಗಲೇಬೇಕು. ಭರವಸೆಯೇ ಬದುಕು ಎನ್ನುವುದ ಮರೆಯದಿರೋಣ, ಎಂದು ಹೇಳಿದ್ದಾರೆ.