ಸಾರಿಗೆ ಬಸ್-ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸಾವು | Janata news
ಕೊಪ್ಪಳ : ತಾಲ್ಲೂಕಿನ ಗುಳದಳ್ಳಿ ಸಮೀಪ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಶುಕ್ರವಾರ ಮಧ್ಯಾಹ್ನ ಸಾರಿಗೆ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಯುವಕರನ್ನು ಮುನಿರಾಬಾದ್ ನಿವಾಸಿಗಳಾದ ವಸಂತಕುಮಾರ್ (29), ವಿಜಯಕುಮಾರ್ (23) ಎಂದು ಗುರುತಿಸಲಾಗಿದೆ.
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವ ಆಗಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :Accident in Koppala