ಐಎಂಎ ಹಗರಣ: ಮಾಜಿ ಸಿಎಂ HD ಕುಮಾರಸ್ವಾಮಿ ಸ್ಪಷ್ಟನೆ | Janata news
ರಾಮನಗರ : ಐಎಂಎ ಹಗರಣದಲ್ಲಿ ನನ್ನ ಪಾತ್ರ ಇಲ್ಲ. ನಾನು ಸಿಎಂ ಆಗಿದ್ದ ಅವಧಿಯಲ್ಲಿ ಈ ಹಗರಣ ಹೊರ ಬಂದಿತ್ತು. ಸಿಸಿಬಿಗೆ ಈ ಹಗರಣದ ತನಿಖೆ ನಡೆಸುವಂತೆ ನಾನೇ ಆದೇಶ ಮಾಡಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದರು.
ರಾಮನಗರದಲ್ಲಿ ಭಾನುವಾರ ಮಾತನಾಡಿದ ಅವರು, ಹಗರಣದ ತನಿಖೆಗೆ ಆದೇಶ ನೀಡಿದಾಗಲೇ ಆತ ದೇಶ ಬಿಟ್ಟು ದುಬೈಗೆ ಪರಾರಿಯಾಗಿದ್ದ. ನಮ್ಮ ಅಧಿಕಾರಿಗಳು ಹಗರಣದ ಆರೋಪಿಯನ್ನ ಬಂಧಿಸಿ ಕರೆತಂದಿದ್ದರು ಎಂದರು.
ರೋಷನ್ ಬೇಗ್ ಒಂದು ಬಾರಿ ಸಂಜೆ ವೇಳೆಗೆ ಕೃಷ್ಣ ಕಚೇರಿಯಲ್ಲಿದ್ದಾಗ ಒಂದು ಇಪ್ತೀಯರ್ ಕೂಟ ಇದೆ ಬರಬೇಕೆಂದು ಹಠ ಹಿಡಿದಿದ್ದರು. ಕೃಷ್ಣ ಕಚೇರಿಯಿಂದ ನಾನು ಅಲ್ಲಿಗೆ ಹೋಗಿದ್ದೆ. ಆ ವೇಳೆಗೆ ಅಲ್ಲಿ ಇಬ್ಬರು ವ್ಯಕ್ತಿಗಳು ಇದ್ರು ಅವರು ಯಾರು ಅಂತಾ ನನಗೆ ಗೊತ್ತಿರಲಿಲ್ಲ.
ರೋಷನ್ ಬೇಗ್ ಅವರು ಮಾಹನ್ ದಾನಿಗಳು ಶಿಕ್ಷಣ ಸಂಸ್ಥೆಗಳಿಗೆ ಇವರಿಂದ ಧಾನ ಧರ್ಮಾ ಮಾಡಿದ್ದಾರೆ ಅಂತಾ ಹೇಳಿದ್ರು ಅಷ್ಟೆ. ಅಲ್ಲಿಯ ವರೆಗೆ ಆತಾ ಯಾರು ಅಂತಾನೆ ಗೊತ್ತಿರಲಿಲ್ಲ. ನಾನೆ ತನಿಖೆಗೆ ಆದೇಶ ಮಾಡಿದ ಮೇಲೆ ನನ್ನ ಪಾತ್ರ ಎಲ್ಲಿ ಇರುತ್ತದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.