ನನ್ನ ಹೆಸರಲ್ಲೇ ರಾಮನಿದ್ದಾನೆ, ನಮ್ಮೂರಿನ ರಾಮಮಂದಿರಕ್ಕೆ ದುಡ್ಡು ಕೊಡುತ್ತೇನೆ: ಸಿದ್ದರಾಮಯ್ಯ | Janata news
ಉಡುಪಿ : ಪಡುಬಿದ್ರಿಯಲ್ಲಿ ಸೋಮವಾರ ನಡೆದ ಜನಧ್ವನಿ ಕಾಂಗ್ರೆಸ್ ಪಾದಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಅವರು, ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಮಾತ್ರ ದೇಣಿಗೆ ಕೊಡಬೇಕೆ, ನಮ್ಮೂರಿನ ರಾಮಮಂದಿರಕ್ಕೆ ಕೊಟ್ಟರೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.
ನನ್ನ ಹೆಸರೇನು? ಸಿದ್ದರಾಮಯ್ಯ. ನನ್ನ ಹೆಸರಲ್ಲೇ ರಾಮನಿದ್ದಾನೆ. ನಾವು ಮಹಾತ್ಮ ಗಾಂಧಿ ಹಿಂದುತ್ವ ಪಾಲಿಸುತ್ತೇವೆ. ಬಿಜೆಪಿಯವರು ಸಾವರ್ಕರ್ ಹಿಂದುತ್ವ ಪಾಲಿಸುತ್ತಾರೆ. ನಾನು ಅಯೋಧ್ಯೆಯ ರಾಮ ಮಂದಿರಕ್ಕೆ ದುಡ್ಡು ಕೊಡಲ್ಲ. ನಮ್ಮೂರಿನ ರಾಮಮಂದಿರಕ್ಕೆ ದುಡ್ಡು ಕೊಡುತ್ತೇನೆ. ಅಯೋಧ್ಯೆಯಲ್ಲಿ ಕಟ್ಟೋದು ದಶರಥನ ಮಗನದ್ದೇ ದೇಗುಲ ಹಾಗೆಯೇ ನಮ್ಮೂರಲ್ಲಿ ಕಟ್ಟುವ ರಾಮಮಂದಿರ ಕೂಡಾ ದಶರಥನ ಮಗನಿಗೇ ಎಂದು ಹೇಳಿದ್ದಾರೆ.
ಯಡಿಯೂರಪ್ಪನಷ್ಟು ಲಂಚಕೋರ ಭ್ರಷ್ಟ ಬೇರೆ ಇಲ್ಲ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಚೆಕ್ ಮೂಲಕ ಲಂಚ ಸ್ವೀಕಾರ ಮಾಡಿದರೆ, ಮಗ ವಿಜಯೇಂದ್ರ ಆರ್ಟಿಜಿಎಸ್ ಮೂಲಕ ಲಂಚ ಪಡೆಯುತ್ತಿದ್ದಾರೆ. ನಾ ಖಾವೂಂಗ, ನಾ ಖಾನೆದೂಂಗ ಎಂದರೆ ಇದೆಯೇ ನರೇಂದ್ರ ಮೋದಿ ಅವರೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಯಡಿಯೂರಪ್ಪ ಡೋಂಗಿ ರೈತನ ಮಗ. ಆತ ರೈತರ ಮೇಲೆ ಗೋಲಿಬಾರ್ ಮಾಡಿ ಕೊಂದು ಹಾಕಿದ. ಸಾಲಮನ್ನ ಮಾಡುವ ನೈತಿಕತೆ ಆತನಿಗಿಲ್ಲ. ಹಸಿರು ಶಾಲು ಹಾಕಲು ಅವನಿಗೆ ಯಾವ ನೈತಿಕತೆಯೂ ಇಲ್ಲ ಎಂದರು.
ಬಡವರು ಹೊಟ್ಟೆ ತುಂಬಾ ಊಟ ಮಾಡಲಿ ಎಂದು ಕಾಂಗ್ರೆಸ್ ಅವಧಿಯಲ್ಲಿ 7 ಕೆ.ಜಿ ಉಚಿತ ಅಕ್ಕಿ ನೀಡಲಾಯಿತು. ಯಡಿಯೂರಪ್ಪ ಮುಖ್ಯಮಂತ್ರಿಯಾದ ಕೂಡಲೇ 5 ಕೆಜಿಗೆ ಕಡಿತಗೊಳಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 10 ಕೆಜಿ ಉಚಿತ ಅಕ್ಕಿ ಕೊಡಲಿದೆ ಎಂದು ಘೋಷಿಸಿದರು.