ಕಿರುಕುಳಕ್ಕೆ ಬೇಸತ್ತು ಮಗುವಿನೊಂದಿಗೆ ಬಾವಿಗೆ ಹಾರಿದ ಗೃಹಿಣಿ | Janata news
ರಾಯಚೂರು : ಪತಿ ಹಾಗೂ ಅತ್ತೆ-ಮಾವನ ಕಿರುಕುಳ ತಾಳಲಾರದೆ ಮಹಿಳೆಯೋರ್ವಳು ತನ್ನ 14 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಆರೋಲಿ ಗ್ರಾಮದಲ್ಲಿ ನಡೆದಿದೆ.
ಹನುಮಂತಿ(29), 14 ತಿಂಗಳ ಮಗು ಉದಯಯ್ ಸಾವನ್ನಪ್ಪಿರುವ ದುರ್ದೈವಿಗಳು.
ರಾಯಚೂರು ತಾಲೂಕಿನ ಮಟಮಾರಿ ಗ್ರಾಮದ ಮೂಲದ ಹನುಮತಿ ಅವರನ್ನು ಆರೋಲಿ ಗ್ರಾಮದ ಹುಲಿಗೆಯ್ಯ ಎಂಬಾತನೊಂದಿಗೆ ಕಳೆದ 7 ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಗಂಡ ಹುಲಿಗೆಯ್ಯ ನಿತ್ಯ ಕುಡಿದು ಬಂದು ಕಿರುಕುಳ ನೀಡುತ್ತಿದ್ದ, ಇತ್ತೀಚೆಗೆ ಪತಿ ಹಾಗೂ ಅತ್ತೆ, ಮಾವ ಮಾನಸಿಕವಾಗಿ, ದೈಹಿಕವಾಗಿ ಕಿರುಕುಳ ನೀಡುತ್ತಿದ್ದರು.
ಇದರಿಂದ ಹನುಮಂತಿ ಬೇಸತ್ತು ಆತ್ಮಹತ್ಯೆ ನಿರ್ಧಾರ ಮಾಡಿದ್ದಾಳೆ ಅಂತ ಮೃತಳ ಕಡೆಯವರು ಆರೋಪಿಸಿದ್ದಾರೆ.
ಇಂದು ಗ್ರಾಮದ ಬಾವಿಯಲ್ಲಿ ಇಬ್ಬರ ಶವ ಪತ್ತೆಯಾಗಿವೆ. ಸದ್ಯ ಶವಗಳನ್ನ ಬಾವಿಯಿಂದ ಹೊರ ತೆಗೆಯಲಾಗಿದೆ. ಮಾನವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತಳ ಗಂಡ, ಅತ್ತೆ, ಮಾವನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.