ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ: ಪ್ರಕರಣದ ಪ್ರಮುಖ ಆರೋಪಿ ಕ್ವಾರಿ ಮಾಲೀಕ ಅರೆಸ್ಟ್ | Janata news
ಚಿಕ್ಕಬಳ್ಳಾಪುರ : ಹಿರೇನಾಗವಲ್ಲಿಯ ಕ್ವಾರಿಯಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬಿಜೆಪಿ ಮುಖಂಡ ಹಾಗೂ ಮತ್ತೋರ್ವನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನೆರೆಯ ತಮಿಳುನಾಡಿನ ಹೊಸೂರು ಬಳಿ ಆರೋಪಿ ನಾಗರಾಜ್ ಹಾಗೂ ಬ್ಲಾಸ್ಟರ್ ಗಣೇಶ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿಕೆ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಈವರೆಗೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ನಾಗರಾಜ್, ರಿಯಾಜ್, ಮಧುಸೂದನ್ ರೆಡ್ಡಿ, ಪ್ರವೀಣ್, ವೆಂಕಟೇಶ ರೆಡ್ಡಿ , ರಾಘವೇಂದ್ರ ರೆಡ್ಡಿ, ಗಣೇಶ್ ಮತ್ತು ವೆಂಕಟ ಶಿವಾರೆಡ್ಡಿ ಬಂಧಿತ ಆರೋಪಿಗಳಾಗಿದ್ದಾರೆ.
ಫೆಬ್ರವರಿ 7 ಪ್ರಕರಣ ದಾಖಲಿಸಿದರೂ ಸಹ ಆರೋಪಿಗಳನ್ನು ಬಂಧಿಸುವಲ್ಲಿ ನಿರ್ಲಕ್ಷ ಮತ್ತು ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಗುಡಿಬಂಡೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಗೋಪಾಲರಡ್ಡಿ ಹಾಗೂ ಇನ್ಸ್ಪೆಕ್ಟರ್ ಮಂಜುನಾಥ್ ಅಮಾನತುಗೊಳಿಸಲಾಗಿದೆ.