ಹಾಡಹಗಲೇ ಚಿಕ್ಕಮಗಳೂರಲ್ಲಿ ದರೋಡೆ ಯತ್ನ! | Janata news
ಚಿಕ್ಕಮಗಳೂರು : ಹಾಡಹಗಲೇ ಮನೆಗೆ ನುಗ್ಗಿ ಮಾರಕಾಸ್ತ್ರಗಳನ್ನು ತೋರಿಸಿ ಚಿನ್ನಾಭರಣ, ಹಣ ದರೋಡೆ ಮಾಡಲು ಯತ್ನಿಸಿರುವ ಘಟನೆ ಕಾಫಿನಾಡು ಚಿಕ್ಕಮಗಳೂರು ನಗರದ ಎಐಟಿ ವೃತ್ತದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಕಳ್ಳರು ದರೋಡೆ ಮಾಡುತ್ತಿರುವ ವೇಳೆ ಆ ಮಹಿಳೆಯ ಮಗ ಮನೆಗೆ ಬರುತ್ತಿದ್ದಂತೆ ಕೈಯಲ್ಲೇ ಚೂರಿ ಹಿಡಿದುಕೊಂಡು ಕಳ್ಳರಿಬ್ಬರೂ ಹೊರ ಬಂದು ಬೈಕ್ ಹತ್ತಿ ಎಸ್ಕೇಪ್ ಆಗುತ್ತಿದ್ದರು. ರಸ್ತೆಬದಿ ಬೈಕ್ ಏರಿ ಕಳ್ಳರು ಎಸ್ಕೇಪ್ ಆಗಬೇಕು ಅನ್ನುವಷ್ಟರಲ್ಲಿ ಅಗ್ನಿಶಾಮಕ ವಾಹನ ಆಪದ್ಭಾಂದವನಂತೆ ಬಂದಿದ್ದು, ಸಿನಿಮಾ ಸ್ಟೈಲ್ನಲ್ಲಿ ಕಳ್ಳರು ಸಿಕ್ಕಿಬಿದ್ದಿದ್ದಾರೆ.
ಈ ದೃಶ್ಯಗಳು ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ. ಇದರಿಂದ ದಿಕ್ಕುತೋಚದಂತಹ ಆರೋಪಿಗಳು ಮಾರಕಾಸ್ತ್ರಗಳನ್ನು ಹಿಡಿದು ರಸ್ತೆಯಲ್ಲಿ ಓಡಲಾರಂಭಿಸಿದ್ದರು. ಸುತ್ತಲೂ ಜಮಾಯಿಸಿದ ಸ್ಥಳೀಯರು ಕಳ್ಳರತ್ತ ಕಲ್ಲುಗಳನ್ನ ತೂರುತ್ತಿದ್ದರು. ಸಿನೀಮಿಯ ರೀತಿಯಲ್ಲಿ ಆರೋಪಿಗಳನ್ನು ಬೆನ್ನಟ್ಟಿದ್ದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.
ಚಿಕ್ಕಮಗಳೂರು ನಗರದ ಮೋಹನ್ ಮತ್ತು ಸಚಿನ್ ಬಂಧಿತ ಆರೋಪಿಗಳು. ಸಚಿನ್ ಸಿಡಿಎ ಮಾಜಿ ಅಧ್ಯಕ್ಷ ಚಂದ್ರೇಗೌಡ ಅವರ ಸಂಬಂಧಿ ಸಚಿನ್. ಈತನ ಸ್ನೇಹಿತ ಮೋಹನ್. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.