ಅಂಕೋಲಾದಲ್ಲಿ ಆಂಬ್ಯುಲೆನ್ಸ್ ಕೊರತೆ: ಪಾರ್ಶ್ವವಾಯು ಪೀಡಿತ ವ್ಯಕ್ತಿಯನ್ನ 5 ಕಿ.ಮೀ. ಕುರ್ಚಿಯಲ್ಲೇ ಹೊತ್ತೊಯ್ದ ಕುಟುಂಬಸ್ಥರು | Janata news
ಅಂಕೋಲಾ : ಪಾರ್ಶ್ವವಾಯುವಿಗೆ ತುತ್ತಾಗಿ ತೀವ್ರ ಅಸ್ವಸ್ಥರಾದ ವ್ಯಕ್ತಿಯೊಬ್ಬರನ್ನು ಖುರ್ಚಿಯನ್ನೇ ಜೋಲಿಯನ್ನಾಗಿ ಮಾಡಿಕೊಂಡು ದುರ್ಗಮ ಅರಣ್ಯ ಪ್ರದೇಶದಿಂದ ಹೊತ್ತು ತಂದು ಆಸ್ಪತ್ರೆಗೆ ಸಾಗಿಸಿದ ದಯನೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಪಂ ವ್ಯಾಪ್ತಿಯ ವರೀಲಬೇಣಾದಲ್ಲಿ ನಡೆದಿದೆ.
ಪೊಕ್ಕ ಗೌಡ(70) ಎಂಬುವವರು ನಿನ್ನೆ ಪಾರ್ಶವಾಯುಗೆ ಒಳಗಾಗಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಬೇಕಿತ್ತು. ಆದರೇ ವರೀಲಬೇಣಾದಲ್ಲಿ ರಸ್ತೆ ಸಮರ್ಪಕವಾಗಿ ಇಲ್ಲದ ಕಾರಣ ಐದು ಕಿಲೋಮೀಟರ್ ದೂರ ಇರುವ ಅಂಕೋಲ ನಗರಕ್ಕೆ ಕುರ್ಚಿಯಲ್ಲಿ ಕೂರಿಸಿ ಕಾಡಿನ ದಟ್ಟ ಹಾದಿಯಲ್ಲಿ ಕುಟುಂಬದವರು ಜೋಲಿ ಮಾಡಿ ಕರೆತಂದಿದ್ದಾರೆ. ಬಳಿಕ ಖಾಸಗಿ ವಾಹನ ಮಾಡಿ ಮಂಗಳೂರಿಗೆ ಕರೆದೊಯ್ಯಲಾಗಿದೆ.
ಜಿಲ್ಲೆಯಲ್ಲಿ ಇರುವ 25 ಆಂಬ್ಯುಲೆನ್ಸ್ಗಳಲ್ಲಿ ಎಂಟು ಮಾತ್ರ ಕಾರ್ಯನಿರ್ವಹಿಸುತಿದ್ದು ಇದರಿಂದಾಗಿ ಹಳ್ಳಿಯ ರೋಗಿಗಳು ಪರದಾಡುವಂತಾಗಿದೆ ಅಂತಾ ಸಾರ್ವಜನಿಕರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.